ಜನ ಮನದ ನಾಡಿ ಮಿಡಿತ

Advertisement

ಪ್ರಾಣ ತಿನ್ನುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು!

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್ ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ.
ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು ಯುವಕರು ಗುಂಡಿ ತಿಳಿಯದೆ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳ್ಕೊಂಡಿದ್ದಾರೆ. ಹತ್ತಾರು ಮಂದಿ ಬೈಕ್ ಸವಾರರು ಕೈಕಾಲು ಮುರಿಸ್ಕೊಂಡಿದ್ದಾರೆ. ಆದರೆ ಇಷ್ಟೆಲ್ಲ ಆದರೂ ಸಂಬಂಧಪಟ್ಟ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ಇಲ್ಲಿ ಗುಂಡಿಗಳ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ಟೋಲ್ ಗೇಟ್ ಶೆಲ್ಟರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಗಾಳಿಮಳೆಗೆ ತಗಡು ಶೀಟ್ ಗಳು ಕೆಳಕ್ಕೆ ಬೀಳುವ ಭಯವಿದ್ದು ವಾಹನ ಸವಾರರು ಪ್ರಾಣ ಭಯದಿಂದಲೇ ಸಂಚರಿಸುತ್ತಿದ್ದಾರೆ. ಟೋಲ್ ಗೇಟ್ ತೆಗೆಸಲು ಪ್ರತಿಭಟನೆ ಮಾಡಿದ್ದ ಸಂಘಟನೆಗಳು ಆ ಬಳಿಕ ಅಲ್ಲಿನ ಸಮಸ್ಯೆಯೇನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಟೋಲ್ ಗೇಟ್ ರದ್ದಾದ ಮೇಲೆ ಉಳಿದ ಶೆಲ್ಟರ್ ಮತ್ತಿತರ ಸರಕುಗಳನ್ನು ಅಲ್ಲಿಂದ ಶಿಫ್ಟ್ ಮಾಡಬೇಕಿತ್ತು. ಆದರೆ ಹಾಗೆ ಮಾಡದೇ ಅಲ್ಲಿಯೇ ಉಳಿಸಿದ್ದೇಕೆ ಎನ್ನುವ ಪ್ರಶ್ನೆ ಜನಸಾಮಾನ್ಯರದ್ದಾಗಿದೆ.

ಪತ್ರಕರ್ತರಿಗೆ ಗಾಯ: ಟೋಲ್ ಗೇಟ್ ಗುಂಡಿಯಲ್ಲಿ ಮಳೆಯ ನೀರು ನಿಂತ ಪರಿಣಾಮ ಆಳದ ಅರಿವಿಲ್ಲದೆ ಬೈಕ್ ಚಲಾಯಿಸಿದ ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ. ಅವರು ಬೇರೆ ಯಾರೂ ಬೀಳುವುದು ಬೇಡ ಎಂದು ನೀರು ನಿಂತಲ್ಲಿ ಅಡ್ಡಲಾಗಿ ಕಲ್ಲನ್ನು ಇಟ್ಟು ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಇಲ್ಲಿ ಹತ್ತಾರು ಅಪಘಾತಗಳು ನಡೆದಿದ್ದು ಇನ್ನಷ್ಟು ಬಲಿಯಾಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!