ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪ್ರಾಣ ತಿನ್ನುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು!

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್ ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ.
ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು ಯುವಕರು ಗುಂಡಿ ತಿಳಿಯದೆ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳ್ಕೊಂಡಿದ್ದಾರೆ. ಹತ್ತಾರು ಮಂದಿ ಬೈಕ್ ಸವಾರರು ಕೈಕಾಲು ಮುರಿಸ್ಕೊಂಡಿದ್ದಾರೆ. ಆದರೆ ಇಷ್ಟೆಲ್ಲ ಆದರೂ ಸಂಬಂಧಪಟ್ಟ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ಇಲ್ಲಿ ಗುಂಡಿಗಳ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ಟೋಲ್ ಗೇಟ್ ಶೆಲ್ಟರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಗಾಳಿಮಳೆಗೆ ತಗಡು ಶೀಟ್ ಗಳು ಕೆಳಕ್ಕೆ ಬೀಳುವ ಭಯವಿದ್ದು ವಾಹನ ಸವಾರರು ಪ್ರಾಣ ಭಯದಿಂದಲೇ ಸಂಚರಿಸುತ್ತಿದ್ದಾರೆ. ಟೋಲ್ ಗೇಟ್ ತೆಗೆಸಲು ಪ್ರತಿಭಟನೆ ಮಾಡಿದ್ದ ಸಂಘಟನೆಗಳು ಆ ಬಳಿಕ ಅಲ್ಲಿನ ಸಮಸ್ಯೆಯೇನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಟೋಲ್ ಗೇಟ್ ರದ್ದಾದ ಮೇಲೆ ಉಳಿದ ಶೆಲ್ಟರ್ ಮತ್ತಿತರ ಸರಕುಗಳನ್ನು ಅಲ್ಲಿಂದ ಶಿಫ್ಟ್ ಮಾಡಬೇಕಿತ್ತು. ಆದರೆ ಹಾಗೆ ಮಾಡದೇ ಅಲ್ಲಿಯೇ ಉಳಿಸಿದ್ದೇಕೆ ಎನ್ನುವ ಪ್ರಶ್ನೆ ಜನಸಾಮಾನ್ಯರದ್ದಾಗಿದೆ.

ಪತ್ರಕರ್ತರಿಗೆ ಗಾಯ: ಟೋಲ್ ಗೇಟ್ ಗುಂಡಿಯಲ್ಲಿ ಮಳೆಯ ನೀರು ನಿಂತ ಪರಿಣಾಮ ಆಳದ ಅರಿವಿಲ್ಲದೆ ಬೈಕ್ ಚಲಾಯಿಸಿದ ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ. ಅವರು ಬೇರೆ ಯಾರೂ ಬೀಳುವುದು ಬೇಡ ಎಂದು ನೀರು ನಿಂತಲ್ಲಿ ಅಡ್ಡಲಾಗಿ ಕಲ್ಲನ್ನು ಇಟ್ಟು ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಇಲ್ಲಿ ಹತ್ತಾರು ಅಪಘಾತಗಳು ನಡೆದಿದ್ದು ಇನ್ನಷ್ಟು ಬಲಿಯಾಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!