ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್ ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ.
ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು ಯುವಕರು ಗುಂಡಿ ತಿಳಿಯದೆ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳ್ಕೊಂಡಿದ್ದಾರೆ. ಹತ್ತಾರು ಮಂದಿ ಬೈಕ್ ಸವಾರರು ಕೈಕಾಲು ಮುರಿಸ್ಕೊಂಡಿದ್ದಾರೆ. ಆದರೆ ಇಷ್ಟೆಲ್ಲ ಆದರೂ ಸಂಬಂಧಪಟ್ಟ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ಇಲ್ಲಿ ಗುಂಡಿಗಳ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ಟೋಲ್ ಗೇಟ್ ಶೆಲ್ಟರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಗಾಳಿಮಳೆಗೆ ತಗಡು ಶೀಟ್ ಗಳು ಕೆಳಕ್ಕೆ ಬೀಳುವ ಭಯವಿದ್ದು ವಾಹನ ಸವಾರರು ಪ್ರಾಣ ಭಯದಿಂದಲೇ ಸಂಚರಿಸುತ್ತಿದ್ದಾರೆ. ಟೋಲ್ ಗೇಟ್ ತೆಗೆಸಲು ಪ್ರತಿಭಟನೆ ಮಾಡಿದ್ದ ಸಂಘಟನೆಗಳು ಆ ಬಳಿಕ ಅಲ್ಲಿನ ಸಮಸ್ಯೆಯೇನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಟೋಲ್ ಗೇಟ್ ರದ್ದಾದ ಮೇಲೆ ಉಳಿದ ಶೆಲ್ಟರ್ ಮತ್ತಿತರ ಸರಕುಗಳನ್ನು ಅಲ್ಲಿಂದ ಶಿಫ್ಟ್ ಮಾಡಬೇಕಿತ್ತು. ಆದರೆ ಹಾಗೆ ಮಾಡದೇ ಅಲ್ಲಿಯೇ ಉಳಿಸಿದ್ದೇಕೆ ಎನ್ನುವ ಪ್ರಶ್ನೆ ಜನಸಾಮಾನ್ಯರದ್ದಾಗಿದೆ.
ಪತ್ರಕರ್ತರಿಗೆ ಗಾಯ: ಟೋಲ್ ಗೇಟ್ ಗುಂಡಿಯಲ್ಲಿ ಮಳೆಯ ನೀರು ನಿಂತ ಪರಿಣಾಮ ಆಳದ ಅರಿವಿಲ್ಲದೆ ಬೈಕ್ ಚಲಾಯಿಸಿದ ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ. ಅವರು ಬೇರೆ ಯಾರೂ ಬೀಳುವುದು ಬೇಡ ಎಂದು ನೀರು ನಿಂತಲ್ಲಿ ಅಡ್ಡಲಾಗಿ ಕಲ್ಲನ್ನು ಇಟ್ಟು ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಇಲ್ಲಿ ಹತ್ತಾರು ಅಪಘಾತಗಳು ನಡೆದಿದ್ದು ಇನ್ನಷ್ಟು ಬಲಿಯಾಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…