ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್ ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ.
ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು ಯುವಕರು ಗುಂಡಿ ತಿಳಿಯದೆ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳ್ಕೊಂಡಿದ್ದಾರೆ. ಹತ್ತಾರು ಮಂದಿ ಬೈಕ್ ಸವಾರರು ಕೈಕಾಲು ಮುರಿಸ್ಕೊಂಡಿದ್ದಾರೆ. ಆದರೆ ಇಷ್ಟೆಲ್ಲ ಆದರೂ ಸಂಬಂಧಪಟ್ಟ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ಇಲ್ಲಿ ಗುಂಡಿಗಳ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ಟೋಲ್ ಗೇಟ್ ಶೆಲ್ಟರ್ ಅಪಾಯಕಾರಿ ಸ್ಥಿತಿಯಲ್ಲಿದೆ. ಗಾಳಿಮಳೆಗೆ ತಗಡು ಶೀಟ್ ಗಳು ಕೆಳಕ್ಕೆ ಬೀಳುವ ಭಯವಿದ್ದು ವಾಹನ ಸವಾರರು ಪ್ರಾಣ ಭಯದಿಂದಲೇ ಸಂಚರಿಸುತ್ತಿದ್ದಾರೆ. ಟೋಲ್ ಗೇಟ್ ತೆಗೆಸಲು ಪ್ರತಿಭಟನೆ ಮಾಡಿದ್ದ ಸಂಘಟನೆಗಳು ಆ ಬಳಿಕ ಅಲ್ಲಿನ ಸಮಸ್ಯೆಯೇನು ಎನ್ನುವುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಟೋಲ್ ಗೇಟ್ ರದ್ದಾದ ಮೇಲೆ ಉಳಿದ ಶೆಲ್ಟರ್ ಮತ್ತಿತರ ಸರಕುಗಳನ್ನು ಅಲ್ಲಿಂದ ಶಿಫ್ಟ್ ಮಾಡಬೇಕಿತ್ತು. ಆದರೆ ಹಾಗೆ ಮಾಡದೇ ಅಲ್ಲಿಯೇ ಉಳಿಸಿದ್ದೇಕೆ ಎನ್ನುವ ಪ್ರಶ್ನೆ ಜನಸಾಮಾನ್ಯರದ್ದಾಗಿದೆ.
ಪತ್ರಕರ್ತರಿಗೆ ಗಾಯ: ಟೋಲ್ ಗೇಟ್ ಗುಂಡಿಯಲ್ಲಿ ಮಳೆಯ ನೀರು ನಿಂತ ಪರಿಣಾಮ ಆಳದ ಅರಿವಿಲ್ಲದೆ ಬೈಕ್ ಚಲಾಯಿಸಿದ ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡ ಘಟನೆಯೂ ನಡೆದಿದೆ. ಅವರು ಬೇರೆ ಯಾರೂ ಬೀಳುವುದು ಬೇಡ ಎಂದು ನೀರು ನಿಂತಲ್ಲಿ ಅಡ್ಡಲಾಗಿ ಕಲ್ಲನ್ನು ಇಟ್ಟು ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಇಲ್ಲಿ ಹತ್ತಾರು ಅಪಘಾತಗಳು ನಡೆದಿದ್ದು ಇನ್ನಷ್ಟು ಬಲಿಯಾಗುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…