ಕರಾವಳಿ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದಿಂದ ನಡೆದ ವಿನೂತನ ಕಾರ್ಯಕ್ರಮ; ನಿಟ್ಟೆ ಹವಾಮಾನ ಕ್ರಿಯಾ ಯೋಜನೆಗೆ ಚಾಲನೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದಿಂದ ನಡೆದ ವಿನೂತನ ಕಾರ್ಯಕ್ರಮ; ನಿಟ್ಟೆ ಹವಾಮಾನ ಕ್ರಿಯಾ ಯೋಜನೆಗೆ ಚಾಲನೆ

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ನಿಟ್ಟೆ ಹವಾಮಾನ ಕ್ರಿಯಾ ಯೋಜನೆ – 2024 (Nitte Climate Action Program 2024) ಕಾರ್ಯಕ್ರಮಕ್ಕೆ ನಗರದ ಅಂಬೇಡ್ಕರ್‌ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ ಅವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಪರಿಸರ ಪ್ರಿಯವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ರಕ್ಷಣೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಪರಿಸರವನ್ನು ಕಾಪಾಡುವುದು ನಮ್ಮ ಕೆಲಸವಲ್ಲ ಸರ್ಕಾರದ ಕೆಲಸ ಎಂದು ಭಾವಿಸುವುದು ತಪ್ಪು. ಅದು ಎಲ್ಲ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು ಪ್ರಮುಖವೆಂದು ಭಾವಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿವೆ. ವಿದ್ಯಾರ್ಥಿಗಳಲ್ಲಿ ಪರಿಸರ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯುಕ್ರಮಕ್ಕೆ ಸರ್ಕಾರವು ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ಗೌರವ ಅತಿಥಿಯಾಗಿ ಮಾತನಾಡಿದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಎಸ್‌. ಪಟಗಾರ್, ಶಾಲಾ ಮಟ್ಟದಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಾದ್ದು ಅತಿ ಮುಖ್ಯವಾದ ಕೆಲಸವಾಗಿದೆ. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಎರಡೂ ವಿಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಈ ವರ್ಷ ಮಂಗಳೂರು ಉತ್ತರ ವಿಭಾಗದ 103 ಶಾಲೆಗಳಿಂದ 13 ಸಾವಿರ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಬಹು ಸಂತಸದ ವಿಷಯ ಎಂದು ಅವರು ಶ್ಲಾಘಿಸಿದರು.

 

 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್‌ ಮಾತನಾಡಿ, ಮಾಲಿನ್ಯ ನಿಯಂತ್ರಣದ ಮಹತ್ವವನ್ನು ವಿವರಿಸಿದರು. ಮಾಲಿನ್ಯ ನಿಯಂತ್ರಣದಿಂದ ಭವಿಷ್ಯವನ್ನು ಹೇಗೆ ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ಅವರು ಉದಾಹರಣೆಗಳ ಸಮೇತ ವಿವರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಅವರು, ಪರಿಸರ ರಕ್ಷಣೆಗೆ ನಿಟ್ಟೆ ವಿಶ್ವವಿದ್ಯಾನಿಲಯವು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಪರಿಸರ ರಕ್ಷಣೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು. ಇದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯವು ಸದಾ ಸಿದ್ಧವಿದೆ. ಈ ಆಶಯದ ಪ್ರತಿಫಲವೇ
ನಿಟ್ಟೆ ಹವಾಮಾನ ಕ್ರಿಯಾ ಯೋಜನೆ ಎಂದು ಅವರು ವಿಶ್ಲೇಷಿಸಿದರು. ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌) ಆರೋಗ್ಯ ಮತ್ತು ಸುರಕ್ಷೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುದರ್ಶನ್ ಹಾಗೂ ಪರಿಸರ ವಿಭಾಗದ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಸುಸ್ಥಿರ ಅಭಿವೃದ್ಧಿ ಕೋಶದ ಪ್ರಧಾನ ಸಂಚಾಲಕರು ಹಾಗೂ ವಿಶ್ವವಿದ್ಯಾನಿಲಯದ ಉಪ ಕುಲಸಚಿವರಾದ ಪ್ರೊ.ಡಾ.ಸುಮಾ ಬಲ್ಲಾಳ್‌ ಅವರು ಸ್ವಾಗತ ಭಾಷಣ ಮಾಡಿದರು. ಡಾ.
ಮುಂಡಕೂರು ರಾಮಣ್ಣ ಶೆಟ್ಟಿ ಸ್ಮಾರಕ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಲತಾ ರಾವ್ ವಂದನಾರ್ಪಣೆ ಮಾಡಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನಿಟ್ಟೆ ವಿಶ್ವವಿದ್ಯಾನಿಲಯವು ಹವಾಮಾನ ಕ್ರಿಯಾ ಯೋಜನೆ ಕುರಿತು ನಿರ್ಮಿಸಿರುವ
ಕಿರು ವಿಡಿಯೊ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್‌ ಕಮ್ಯುನಿಕೇಷನ್ ಸಹ ಪ್ರಾಧ್ಯಾಪಕ ಡಾ. ನೇಸರ ಕಾಡನಕುಪ್ಪೆ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟರು.
ನಿಟ್ಟೆ ಹವಾಮಾನ ಕ್ರಿಯಾ ಯೋಜನೆಯು ಒಟ್ಟು 5 ವರ್ಷಗಳ ಕಾಲ ನಡೆಯಲಿದ್ದು, ಇದು ಎರಡನೇಯ ವರ್ಷದ ಕಾರ್ಯಕ್ರಮವಾಗಿದೆ. 2024ರ ಈ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಲಯದಿಂದ ಒಟ್ಟು 103 ಶಾಲೆಗಳಿಂದ
13 ಸಾವಿರ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ತಾಂತ್ರಿಕ ಸಂಶೋಧನೆ ನಿರ್ದೇಶಕ ಪ್ರೊ.ಡಾ.ಜಿ. ಶ್ರೀನಿಕೇತನ್, ಸುಸ್ಥಿರ ಅಭಿವೃದ್ಧಿ ಕೋಶದ ಸದಸ್ಯ ಕಾರ್ಯದರ್ಶಿ ಡಾ.ವಿನಾಯಕ ಶೇಟ್, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಶಶಿಕುಮಾರ ಶೆಟ್ಟಿ ಭಾಗವಹಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…

21 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…

21 hours ago

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…

21 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

21 hours ago

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…

21 hours ago

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

2 days ago