ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈ ದಿನಗಳಲ್ಲಿ ಸಮಾಜಕ್ಕಾಗಿ ವಿಶೇಷ ಕೆಲಸವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ, ಇದರ ಜೊತೆಗೆ ಟ್ರಸ್ಟ್ ಹೆಸರಿನಲ್ಲಿ ನ.14ರಂದು ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಿದ್ದೇವೆ“ ಎಂದು ಸಂಸ್ಥೆಯ ಸಿಇಒ ಲಂಚುಲಾಲ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
”ಇದೇ ಸಂದರ್ಭದಲ್ಲಿ ಸೌಹಾರ್ದಯುತವಾಗಿ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದ ಮೂರು ಬಡ ಕುಟುಂಬದ ಜೊಡಿಗೆ ಸಾಮೂಹಿಕ ಮದುವೆಯನ್ನು ಮಾಡಲು ನಿರ್ಧರಿಸಲಾಗಿದೆ. ಕಡುಬಡವರ ಮದುವೆಯ ಸಂಪೂರ್ಣ ಖರ್ಚು ಜೊತೆಗೆ ಜೀವನ ನಿರ್ವಹಣೆಗೆ 50000 ರೂ. ಕೊಡಲಾಗುವುದು, ಹಿಂದೂ ಜೋಡಿ ಮುಂದೆ ಬಂದಿದ್ದು ಮುಸ್ಲಿಂ, ಕ್ರೈಸ್ತ ಜೋಡಿ ಅವರಾಗಿಯೇ ಮುಂದೆ ಬಂದಲ್ಲಿ ಖುಷಿಯ ವಿಚಾರ. ಬಡವರ ಹಿತಕ್ಕಾಗಿ ಸಮಾಜ ಸೇವೆಗಾಗಿ ಮಹತ್ತರ ಕಾರ್ಯದಲ್ಲಿ ನಮ್ಮ ಸಂಸ್ಥೆಯು ತೊಡಗಿಕೊಂಡಿದ್ದು ಇದಕ್ಕೆ ಜನರು ಸಹಕಾರ ನೀಡಬೇಕು“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಚರಣ್ ರಾಜ್ ಬಂದ್ಯೋಡು ಮತ್ತಿತರರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…