ಜನ ಮನದ ನಾಡಿ ಮಿಡಿತ

Advertisement

ಕೊಡವೂರು: ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ

ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು, ಲಯನ್ಸ್ & ಲಿಯೋ ಕ್ಲಬ್, ಪರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಲ್ಪೆ, ಸಮುದಾಯ ವೈದ್ಯಕೀಯ ವಿಭಾಗ, ನರರೋಗ ವಿಭಾಗ, ಅಕ್ಯುಪೇಶನಲ್ ಥೆರಪಿ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.


ಕಾರ್ಯಕ್ರಮವನ್ನು ಕೆ.ಎಂ.ಸಿ. ಮಣಿಪಾಲದ ನರರೋಗ ತಜ್ಞರಾದ ಡಾ. ಅರವಿಂದ ಎನ್. ಪ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಶ್ರೀ ವಿಜಯ ಕೊಡವೂರು, ಅಕ್ಯುಪೇಶನಲ್ ಥೆರಪಿ ವಿಭಾಗದ ಪ್ರಾಧ್ಯಾಪಕರಾದ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ, ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ದಿವ್ಯಾ ಪ್ರಭು, ಪರ್ಕಳ ಲಯನ್ಸ್ & ಲಿಯೋ ಕ್ಲಬ್ ನ ರಾಧಾಕೃಷ್ಣ ಮೆಂಡನ್, ದಿವ್ಯಾಂಗ ರಕ್ಷಣಾ ಸಮಿತಿ ಕಾರ್ಯದರ್ಶಿ ಜಯ ಪೂಜಾರಿ ಕಲ್ಮಾಡಿ, ದಿವ್ಯಾಂಗ ರಕ್ಷಣಾ ಸಮಿತಿಯ ಮ್ಯಾನೇಜರ್ ಅಖಿಲೇಶ್ ಎ ಉಪಸ್ಥಿತರಿದ್ದರು. ತರುವಾಯ ಸ್ಟ್ರೋಕ್ ಸಮಸ್ಯೆಯ ಬಗ್ಗೆ ಡಾ. ಅರವಿಂದ ಎನ್. ಪ್ರಭು ಹಾಗೂ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ ಅವರು ಮಾಹಿತಿ ನೀಡಿದರು. ಅಕ್ಯುಪೇಶನಲ್ ಥೆರಪಿ ವಿಭಾಗದ ವಿದ್ಯಾರ್ಥಿಗಳಿಂದ ಸ್ಟ್ರೋಕ್ ನ ಕುರಿತು ಕಿರು ಪ್ರಹಸನ ನಡೆಯಿತು. ನಂತರ ಶಿಬಿರಕ್ಕೆ ಬಂದವರಿಗೆ ನರ ಸಂಬಂಧಿತ ಸಮಸ್ಯೆ ಹಾಗೂ ಇನ್ನಿತರ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾ. ದಲರಾಜ್, ಡಾ. ಜೆಲಿಟಾ, ಸಾಮಾಜಿಕ ಕಾರ್ಯಕರ್ತ ಮಹೇಶ್, ಅಕ್ಯುಪೇಶನ್ ವಿಭಾಗದ ಸದಿಚಾ ಕಾಮತ್, ಸಿ.ಹೆಚ್.ಓ. ಮೈತ್ರಿ, ಶುಶ್ರೂಷಕಿಯರಾದ ಸುರೇಖಾ & ಲವಿನಾ, ಸಿಬ್ಬಂದಿ ಸೃಜನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!