ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು, ಲಯನ್ಸ್ & ಲಿಯೋ ಕ್ಲಬ್, ಪರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಲ್ಪೆ, ಸಮುದಾಯ ವೈದ್ಯಕೀಯ ವಿಭಾಗ, ನರರೋಗ ವಿಭಾಗ, ಅಕ್ಯುಪೇಶನಲ್ ಥೆರಪಿ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಕೆ.ಎಂ.ಸಿ. ಮಣಿಪಾಲದ ನರರೋಗ ತಜ್ಞರಾದ ಡಾ. ಅರವಿಂದ ಎನ್. ಪ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಶ್ರೀ ವಿಜಯ ಕೊಡವೂರು, ಅಕ್ಯುಪೇಶನಲ್ ಥೆರಪಿ ವಿಭಾಗದ ಪ್ರಾಧ್ಯಾಪಕರಾದ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ, ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ದಿವ್ಯಾ ಪ್ರಭು, ಪರ್ಕಳ ಲಯನ್ಸ್ & ಲಿಯೋ ಕ್ಲಬ್ ನ ರಾಧಾಕೃಷ್ಣ ಮೆಂಡನ್, ದಿವ್ಯಾಂಗ ರಕ್ಷಣಾ ಸಮಿತಿ ಕಾರ್ಯದರ್ಶಿ ಜಯ ಪೂಜಾರಿ ಕಲ್ಮಾಡಿ, ದಿವ್ಯಾಂಗ ರಕ್ಷಣಾ ಸಮಿತಿಯ ಮ್ಯಾನೇಜರ್ ಅಖಿಲೇಶ್ ಎ ಉಪಸ್ಥಿತರಿದ್ದರು. ತರುವಾಯ ಸ್ಟ್ರೋಕ್ ಸಮಸ್ಯೆಯ ಬಗ್ಗೆ ಡಾ. ಅರವಿಂದ ಎನ್. ಪ್ರಭು ಹಾಗೂ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ ಅವರು ಮಾಹಿತಿ ನೀಡಿದರು. ಅಕ್ಯುಪೇಶನಲ್ ಥೆರಪಿ ವಿಭಾಗದ ವಿದ್ಯಾರ್ಥಿಗಳಿಂದ ಸ್ಟ್ರೋಕ್ ನ ಕುರಿತು ಕಿರು ಪ್ರಹಸನ ನಡೆಯಿತು. ನಂತರ ಶಿಬಿರಕ್ಕೆ ಬಂದವರಿಗೆ ನರ ಸಂಬಂಧಿತ ಸಮಸ್ಯೆ ಹಾಗೂ ಇನ್ನಿತರ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾ. ದಲರಾಜ್, ಡಾ. ಜೆಲಿಟಾ, ಸಾಮಾಜಿಕ ಕಾರ್ಯಕರ್ತ ಮಹೇಶ್, ಅಕ್ಯುಪೇಶನ್ ವಿಭಾಗದ ಸದಿಚಾ ಕಾಮತ್, ಸಿ.ಹೆಚ್.ಓ. ಮೈತ್ರಿ, ಶುಶ್ರೂಷಕಿಯರಾದ ಸುರೇಖಾ & ಲವಿನಾ, ಸಿಬ್ಬಂದಿ ಸೃಜನ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…