ಜನ ಮನದ ನಾಡಿ ಮಿಡಿತ

Advertisement

ಆರೋಗ್ಯ: ನಿಂಬೆ ಹಣ್ಣಿನ ಉಪಯೋಗಗಳ ಬಗ್ಗೆ ತಿಳಿದಿದ್ದೀರಾ? – ಆರೋಗ್ಯ ರಕ್ಷಕ ನಿಂಬೆ ಹಣ್ಣು

ನಿಂಬೆ ಹಣ್ಣು ಎಂದಾಕ್ಷಣ ಓಹ್! ಹುಳಿ! ಎಂದು ಮುಖ ಸಿಂಡರಿಸುತ್ತೇವೆ. ಆದರೆ ಈ ಹುಳಿ ನಿಂಬೆ ಹಣ್ಣು ಆರೋಗ್ಯ ರಕ್ಷಣೆಯಲ್ಲಿ ಎಲ್ಲರಿಗಿಂತ ಮುಂದೆ. ಈ ನಿಂಬೆ ಹಣ್ಣು ಮಿಟಮಿನ್‌ ಸಿ ಯ ಸಮೃದ್ಧ ಆಗರ. ಅಡುಗೆಗೆ, ಆರೋಗ್ಯಕ್ಕೆ , ಸೌಂದರ್ಯಕ್ಕೆ ಹೀಗೆ ಹತ್ತು ಹಲವು ವಿಧಗಳಲ್ಲಿ ನಿಂಬೆಹಣ್ಣು ಭಾರಿ ಉಪಕರ.

1. ನೆಗಡಿ, ಕೆಮ್ಮು, ಕಫ‌ ಇರುವಾಗ ಬಿಸಿ ನೀರಿಗೆ ನಿಂಬೆ ಹಿಂಡಿ, ಕರಿ ಮೆಣಸು ಬೆರಸಿ ಕುಡಿಯುವುದರಿಂದ ನೆಗಡಿ, ಕೆಮ್ಮು, ಕಫ‌ ನಿವಾರಣೆಯಾಗುವುದು.

2. ನಿಂಬೆ ರಸ,ಉಪ್ಪು ಬೆರಸಿ ಹಲ್ಲು ವಸಡುಗಳನ್ನು ತಿಕ್ಕುವುದರಿಂದ ಹಲ್ಲು ಶುಭ್ರವಾಗುವುದು.

3.ತುರಿಕೆ ,ಕಜ್ಜಿ ಇರುವ ಭಾಗದಲ್ಲಿ ನಿಂಬೆರಸ, ಅರಶಿನ ಹುಡಿ, ಉಪ್ಪು ಬೆರಸಿ ತಿಕ್ಕಿದರೆ ಪರಿಹಾರ.

4. ಕೈಕಾಲಿನ ಚರ್ಮ ಒಡೆದು ಬಿರುಕು ಬಿಟ್ಟಿದರೆ ನಿಂಬೆಯ ಹೋಳಿನಿಂದ ತಿಕ್ಕಿ ಸುಮಾರು 25 ರಿಂದ 30 ನಿಮಿಷದ ಬಳಿಕ ತೊಳೆದು ಹಾಲಿನ ಕೆನೆ ಲೇಪಿಸಿ ತಿಕ್ಕಬೇಕು.

5. ನಿಂಬೆ ರಸ ,ಈರುಳ್ಳಿ ರಸ ಮತ್ತು ಜೇನು ಬೆರಸಿ ಕುಡಿದರೆ ವಾಂತಿ ಹತೋಟಿಗೆ ಬರುತ್ತದೆ.

6. ಬೊಜ್ಜು ಕರಗಿಸಲು ಒಂದು ಕಪ್‌ ಬಿಸಿ ನೀರಿಗೆ ಅರ್ಧ ನಿಂಬೆರಸ ಬೆರಸಿ ನಿತ್ಯ ಖಾಲಿ ಹೊಟ್ಟೆಗೆ ಕುಡಿದು ಒಂದು ಗಂಟೆ ಬಳಿಕ ಹೊಟ್ಟೆ ಖಾಲಿ ಬಿಡಬೇಕು.

7. ಬಾಯಿ ಹುಣ್ಣಿಗೆ ನೀರಿನಲ್ಲಿ ನಿಂಬೆ ರಸ ಮತ್ತು ಸ್ವಲ್ಪ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿದರೆ ಹುಣ್ಣುಗಳು ನಿವಾರಣೆಯಾಗುವುದು.

ಸುಂದರ ತ್ವಚೆ ಗೆ ರಾಮಬಾಣ:

1. ಪುದೀನಾ ರಸದೊಂದಿಗೆ ನಿಂಬೆರಸ ಬೆರಸಿ ತಿಕ್ಕಿದರೆ ಮೊಡವೆ ನಿವಾರಕ.

2.ನಿಂಬೆರಸವನ್ನು ಕೂದಲಿನ ಬುಡಕ್ಕೆ ಹಚ್ಚಿ ತಿಕ್ಕುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದು.

3.ನಿಂಬೆ ರಸ ,ಜೇನು ಬೆರಸಿ ಪಾನಕದಂತೆ ಕುಡಿದರೆ ಚರ್ಮ, ಕೂದಲುಗಳಿಗೆ ಉತ್ತಮ.

4.ನಿಂಬೆಯ ಸಿಪ್ಪೆಯನ್ನು ಸಣ್ಣಗೆ ಹಚ್ಚಿ ಒಣಗಿಸಿ ಪುಡಿ ಮಾಡಿ ಕಡಲೆ ಹಿಟ್ಟಿನೊಂದಿಗೆ ಬೆರಸಿಡಬೇಕು ಇದನ್ನು ನಿತ್ಯವು ಹಾಲಿನ ಕೆನೊಂದಿಗೆ ಮುಖಕ್ಕೆ ಲೇಪಿಸಿ ಸ್ನಾನ ಮಾಡಿದರೆ ಮುಖದ ಕಾಂತಿ ಹೆಚ್ಚುತ್ತದೆ.

5.ಊಟದ ಬಳಿಕ ನಿಂಬೆರಸಯುಕ್ತ ಬಿಸಿ ನೀರಲ್ಲಿ ಕೈ ತೊಳೆದರೆ ಕೈಯ ಜಿಡ್ಡು ನಿವಾರಣೆಯಾಗುತ್ತದೆ.

ಹೀಗೆ ಹತ್ತು ಹಲವು ಉಪಯೋಗವಿರುವ ನಿಂಬೆ ಹಣ್ಣು ಆರೋಗ್ಯ ರಕ್ಷಣೆಯಲ್ಲಿ ಎಲ್ಲರಿಗಿಂತ ಮುಂಚೂಣಿಯಲ್ಲಿರುತ್ತದೆ. ಹಳದಿ ಬಣ್ಣದ ಪುಟ್ಟ ಪುಟ್ಟ ಹಣ್ಣುಗಳು ಇಷ್ಟೊಂದು ಉಪಕರ!

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!