ಜನ ಮನದ ನಾಡಿ ಮಿಡಿತ

Advertisement

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕರಾದ ಡಿ.ವೇದವ್ಯಾಸ ಕಾಮತ್ ಮನವಿ

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!