ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…