ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ

ಮುಲ್ಕಿ:ಮುಲ್ಕಿ ಪೊಲೀಸ್ ಠಾಣಾ ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52 ) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ

ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ,ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ,, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!