ಮುಲ್ಕಿ:ಮುಲ್ಕಿ ಪೊಲೀಸ್ ಠಾಣಾ ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52 ) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ
ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ,ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ,, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…