ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ವ್ಯಕ್ತಿಯನ್ನು ಸುಧಾಕರ (39 ಎಂದು ಗುರುತಿಸಲಾಗಿದೆ. ಮೃತ ಸುಧಾಕರನ ತಾಯಿ ಕಳೆದ ತಿಂಗಳ ಹಿಂದೆ ಮೃತಪಟ್ಟಿದ್ದು, ಮಾನಸಿಕ ಖಿನ್ನತೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ ಮೃತನ ತಮ್ಮ ಪ್ರಕಾಶ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



