ಮುಲ್ಕಿ ಬಂಟರ ಸಂಘದ ಕಟ್ಟಡ ಕಾಮಗಾರಿಯ ನವೀಕರಣದ ಕಾರ್ಯಕ್ರಮವು ಬೆಳಿಗ್ಗೆ 10:00ಗೆ ಸುಮುಹೂರ್ತದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಧರ್ಮದರ್ಶಿಗಳಾದ ಹಿರಿಯರಾದ ಮನೋಹರ ಶೆಟ್ಟಿ ಮತ್ತು ಬಂಟ ಸಮಾಜದ ಯುವನೇತಾರ ಬಂಟಕುಲಭವ್ಯಾ0ಶು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಅವರ ಅಮೃತ ಹಸ್ತದೊಂದಿಗೆ ಕಟ್ಟಡಕ್ಕೆ ಚಾಲನೆ ನೀಡಲಾಯಿತು.
ಮುಂಬರುವ ವರ್ಷ ಬಂಟರ ಸಂಘಕ್ಕೆ ಶತಮಾನದ ವರ್ಷ. ನಮ್ಮ ಹಿರಿಯರು ಹಾಕಿಕೊಟ್ಟ ಈ ಸಂಘಟನೆಯನ್ನು ಕಿರಿಯ ರಾದ ನಾವು ಉತ್ತಮವಾದ ರೀತಿಯಲ್ಲಿ ಮುಂದುವರೆಸಿಕೊAಡು ಹೋಗಬೇಕು. ಹಿರಿಯರ ಮಾರ್ಗದರ್ಶನಕ್ಕೆ ಅನುಸಾರವಾಗಿ ಮುಂದುವರಿಯಬೇಕು. ಇದಕ್ಕೆ ದೇವರ ಅನುಗ್ರಹವು ಇರುತ್ತದೆ. ನಾವೆಲ್ಲ ಒಂದಾಗಿ ನಮ್ಮ ಸಂಘಟನೆಯನ್ನು ಬಲಪಡಿಸೋಣ. ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಗತಿಪತ್ರದಲ್ಲಿ ಸಾಗಿ ಲೋಕಾರ್ಪಣೆಯಾಗಲಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟ ಶುಭವನ್ನು ಹಾರೈಸಿದ್ರು. ಮುಂದಿನ ದಿನಗಳಲ್ಲಿ ಬಪ್ಪನಾಡಿನ ದುರ್ಗಾಪರಮೇಶ್ವರಿಯ ಅನುಗ್ರಹದಿಂದ ಶೀಘ್ರವೇ ನಮ್ಮ ಕಟ್ಟಡ ಲೋಕಾರ್ಪಣೆಯಾಗಿ ಸಮಾಜಕ್ಕೆ ಸ್ಪಂದಿಸಲಿ ಎಂದು ಮನೋಹರ ಶೆಟ್ಟಿ ಎಂದ್ರು. ಇನ್ನು ಈ ಸಂದರ್ಭದಲ್ಲಿ ಬಂಟರ ಸಂಘ ಮುಲ್ಕಿ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ಮುರಳಿಧರ ಭಂಡಾರಿ ಹಾಗೂ ಪುರುಷೋತ್ತಮ ಶೆಟ್ಟಿ,
ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…