ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…