ಜನ ಮನದ ನಾಡಿ ಮಿಡಿತ

Advertisement

ಚೇರು ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರ ನಿಯೋಜನೆಗೆ ಒತ್ತಾಯಿಸಿ ಪ್ರತಿಭಟನೆ

ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಊರವರು , ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ವತಿಯಿಂದ ಬಿಳಿನೆಲೆ ಗ್ರಾಮ ಪಂಚಾಯಿತಿ ಕಚೇರಿಯ ಜಗುಲಿಯಲ್ಲಿ ಘಟನೆ ಅನಿದಿಷ್ಟಾವಧಿ ಮುಷ್ಕರ ಪ್ರತಿಭಟನೆ ಆರಂಭವಾಗಿದೆ.


ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ವಿನೀಶ್ ಬಿಳಿನೆಲೆ ಮಾತನಾಡಿ,ವಿದ್ಯಾರ್ಥಿಗಳ ಕೊರತೆಯಿಂದ ಈ ವರ್ಷದ ಶೈಕ್ಷಣಿಕ ಆರಂಭದಲ್ಲಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದ್ದಾಗ ಊರವರು ಇಲಾಖೆಯ ಗಮನ ಸೆಳೆದು ಸ್ಥಳಕ್ಕೆ ಬಂದ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಒರ್ವ ಶಿಕ್ಷಕರು ಹಾಗೂ ಒರ್ವ ಅತಿಥಿ ಶಿಕ್ಷಕರ ನಿಯೋಜಿಸುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ಒರ್ವ ಖಾಯಂ ಶಿಕ್ಷಕರನ್ನು ನಿಯೋಜಿಸಲಾಗಿತ್ತು. ಬಳಿಕ ಊರವರು ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ್ದರು. ಆದರೆ ಹಲವು ತಿಂಗಳು ಕಳೆದರೂ ಅತಿಥಿ ಶಿಕ್ಷಕರ ನಿಯೋಜಿಸದೇ ಇರುವುದರಿಂದ ಆರಂಭದಲ್ಲಿ ೧೩ ವಿದ್ಯಾರ್ಥಿಗಳಿದ್ದ ಇದೀಗ ೪ ಕ್ಕೆ ಇಳಿದಿದೆ. ಇದಕ್ಕೆಲ್ಲ ಇಲಾಖೆಯ ಕಾರಣವಾಗಿದೆ. ಇಲ್ಲಿರುವ ಖಾಯಂ ಶಿಕ್ಷಕರು ಕರ್ತವ್ಯ ನಿಮಿತ್ತ ಹೊರ ಹೋಗುವ ಸಂದರ್ಭದಲ್ಲಿ ಇಲ್ಲಿ ಶಿಕ್ಷಕರಿಲ್ಲದೇ ಸಮಸ್ಯೆ ಆಗುತ್ತಿದೆ ತಕ್ಷಣ ಖಾಯಂ ಶಿಕ್ಷಕರನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ರವಾರ ಸಂಜೆಯವರೆಗೆ ನಡೆದ ಪ್ರತಿಭಟನೆ ಸೋಮವಾರದಿಂದ ಮತ್ತೆ ಅತಿಥಿ ಶಿಕ್ಷಕ ನಿಯೋಜಿಸುವ ಬೇಡಿಕೆ ಇಡೇರುವ ತನಕ ಪ್ರತಿಭಟನೆ ಮುಂದುವರಿಯಲಿದೆ ತಿಳಿಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಪುಷ್ಪಲತಾ, ಉಪಾಧ್ಯಕ್ಷೆ ಸೌಮ್ಯ, ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಸಂಚಾಲಕ ವಿನೀಶ್ ಬಿಳಿನೆಲೆ , ನಿರ್ದೇಶಕ ರಾಮಕೃಷ್ಣ ಹೊಳ್ಳಾರು , ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸುಕುಮಾರ ಚೇರು, ಊರವರಾದ ಮಮತಾ ಚೇರು, ರಾಜೇಶ್ವರಿ, ಗಿರಿಜಾ ಗೋಪಾಳಿ, ಅಕ್ಷತಾ ಗೋಪಾಳಿ, ತೀರ್ಥ ಗೋಪಾಳಿ, ಲಕ್ಷ್ಮೀ ಗೋಪಾಳಿ, ವಿಮಲ ಗೋಪಾಳಿ, ದೇವಪ್ಪ ಗೋಪಾಳಿ, ಹರೀಶ್ ಚೇರು, ಪುರಂದರ ಗೋಪಾಳಿ, ಪ್ರವೀಣ್ ಭಾಗ್ಯ, ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!