ಕರಾವಳಿ

ಚೇರು ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರ ನಿಯೋಜನೆಗೆ ಒತ್ತಾಯಿಸಿ ಪ್ರತಿಭಟನೆ

ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಊರವರು , ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ವತಿಯಿಂದ ಬಿಳಿನೆಲೆ ಗ್ರಾಮ ಪಂಚಾಯಿತಿ ಕಚೇರಿಯ ಜಗುಲಿಯಲ್ಲಿ ಘಟನೆ ಅನಿದಿಷ್ಟಾವಧಿ ಮುಷ್ಕರ ಪ್ರತಿಭಟನೆ ಆರಂಭವಾಗಿದೆ.


ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ವಿನೀಶ್ ಬಿಳಿನೆಲೆ ಮಾತನಾಡಿ,ವಿದ್ಯಾರ್ಥಿಗಳ ಕೊರತೆಯಿಂದ ಈ ವರ್ಷದ ಶೈಕ್ಷಣಿಕ ಆರಂಭದಲ್ಲಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದ್ದಾಗ ಊರವರು ಇಲಾಖೆಯ ಗಮನ ಸೆಳೆದು ಸ್ಥಳಕ್ಕೆ ಬಂದ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಒರ್ವ ಶಿಕ್ಷಕರು ಹಾಗೂ ಒರ್ವ ಅತಿಥಿ ಶಿಕ್ಷಕರ ನಿಯೋಜಿಸುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ಒರ್ವ ಖಾಯಂ ಶಿಕ್ಷಕರನ್ನು ನಿಯೋಜಿಸಲಾಗಿತ್ತು. ಬಳಿಕ ಊರವರು ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ್ದರು. ಆದರೆ ಹಲವು ತಿಂಗಳು ಕಳೆದರೂ ಅತಿಥಿ ಶಿಕ್ಷಕರ ನಿಯೋಜಿಸದೇ ಇರುವುದರಿಂದ ಆರಂಭದಲ್ಲಿ ೧೩ ವಿದ್ಯಾರ್ಥಿಗಳಿದ್ದ ಇದೀಗ ೪ ಕ್ಕೆ ಇಳಿದಿದೆ. ಇದಕ್ಕೆಲ್ಲ ಇಲಾಖೆಯ ಕಾರಣವಾಗಿದೆ. ಇಲ್ಲಿರುವ ಖಾಯಂ ಶಿಕ್ಷಕರು ಕರ್ತವ್ಯ ನಿಮಿತ್ತ ಹೊರ ಹೋಗುವ ಸಂದರ್ಭದಲ್ಲಿ ಇಲ್ಲಿ ಶಿಕ್ಷಕರಿಲ್ಲದೇ ಸಮಸ್ಯೆ ಆಗುತ್ತಿದೆ ತಕ್ಷಣ ಖಾಯಂ ಶಿಕ್ಷಕರನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ರವಾರ ಸಂಜೆಯವರೆಗೆ ನಡೆದ ಪ್ರತಿಭಟನೆ ಸೋಮವಾರದಿಂದ ಮತ್ತೆ ಅತಿಥಿ ಶಿಕ್ಷಕ ನಿಯೋಜಿಸುವ ಬೇಡಿಕೆ ಇಡೇರುವ ತನಕ ಪ್ರತಿಭಟನೆ ಮುಂದುವರಿಯಲಿದೆ ತಿಳಿಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಪುಷ್ಪಲತಾ, ಉಪಾಧ್ಯಕ್ಷೆ ಸೌಮ್ಯ, ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಸಂಚಾಲಕ ವಿನೀಶ್ ಬಿಳಿನೆಲೆ , ನಿರ್ದೇಶಕ ರಾಮಕೃಷ್ಣ ಹೊಳ್ಳಾರು , ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸುಕುಮಾರ ಚೇರು, ಊರವರಾದ ಮಮತಾ ಚೇರು, ರಾಜೇಶ್ವರಿ, ಗಿರಿಜಾ ಗೋಪಾಳಿ, ಅಕ್ಷತಾ ಗೋಪಾಳಿ, ತೀರ್ಥ ಗೋಪಾಳಿ, ಲಕ್ಷ್ಮೀ ಗೋಪಾಳಿ, ವಿಮಲ ಗೋಪಾಳಿ, ದೇವಪ್ಪ ಗೋಪಾಳಿ, ಹರೀಶ್ ಚೇರು, ಪುರಂದರ ಗೋಪಾಳಿ, ಪ್ರವೀಣ್ ಭಾಗ್ಯ, ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…

4 hours ago

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

1 day ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

2 days ago

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…

2 days ago

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…

2 days ago

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…

2 days ago