ಕ್ರೈಮ್

ದಾರಿ ವಿವಾದ: ಪ್ರಗತಿಪರ ಕೃಷಿಕನ ಅಟ್ಟಾಡಿಸಿ ಕೊಲೆ-ಸಂಬಂಧಿ ಸಹಿತ ಮೂವರ ಕೃತ್ಯ: ಪ್ರಮುಖ ಆರೋಪಿ ಹರೀಶ್ ವಶಕ್ಕೆ

ದಾರಿ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಅವರ ಸಂಬಂಧಿಕನೇ ರಾತ್ರಿ ಹೊತ್ತು ಕಾದು ಕುಳಿತು ಅಟ್ಟಾಡಿಸಿ ಕತ್ತಿಯಿಂದ ಕೊಲೆ ನಡೆಸಿದ ಬೀಭತ್ಸ್ಯ ಘಟನೆ ನ.8ರಂದು ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರೀಶ್ ಎಂಬಾತನನ್ನು ಶುಕ್ರವಾರದಂದು ತಡರಾತ್ರಿ ಗೋಳಿತ್ತೋಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.


ಕಡಬ ತಾಲೂಕಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ವೆಂಕಪ್ಪ ಗೌಡ ಮತ್ತು ದೇಜಮ್ಮ ದಂಪತಿಯ ಪುತ್ರ ರಮೇಶ ಗೌಡ(49) ಕೊಲೆಯಾದ ವ್ಯಕ್ತಿ. ಇವರ ಸಂಬಂಧಿಕನೇ ಆಗಿರುವ ಪೆರ್ಲದ ಕಲ್ಲಂಡದ ಹರೀಶ, ಸಂತೋಷ್, ಧರ್ಣಪ್ಪ ಯಾನೆ ಬೆಳ್ಳಿಯಪ್ಪ ಸೇರಿ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆಯ ವಿವರ:
ರಮೇಶ ಗೌಡರ ಮತ್ತು ಆರೋಪಿ ಹರೀಶ್‌ ನ ಮನೆಯವರಿಗೂ ಸುಮಾರು 7-8 ತಿಂಗಳ ಹಿಂದೆ ರಸ್ತೆಗೆ ನೀರಿನ ಪೈಪ್‌ ಅಳವಡಿಸಿದ ಬಗ್ಗೆ ಬಾಯಿ ಮಾತಿನಲ್ಲಿ ಗಲಾಟೆಯಾಗಿದ್ದು ಈ ಬಗ್ಗೆ ವೆಂಕಪ್ಪಗೌಡ ಅವರು ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದರು, ಎರಡು ತಿಂಗಳ ಹಿಂದೆ ರಮೇಶ್ ಗೌಡ ರ ಜಾಗದಲ್ಲಿದ್ದ ಜಾಗದಲ್ಲಿರುವ ಆಕೇಶಿಯ ಮರವೊಂದು ಮಳೆಗೆ ಹರೀಶ್‌ ರವರ ರಬ್ಬರ್‌ ತೋಟಕ್ಕೆ ಬಿದ್ದಿದ್ದು, ನ.8ರಂದು ಮಧ್ಯಾಹ್ನ 1.30ಕ್ಕೆ ಹರೀಶ್ ಅವರು ಮರವನ್ನು ಕಡಿಯುತ್ತಿದ್ದಾಗ ರಮೇಶ್ ಅವರು ಮರ ಕಡಿಯುವ ಸ್ಥಳಕ್ಕೆ ತೆರಳಿ ಮರ ಕಡಿಯುವುದು ಬೇಡ ಎಂದು ಹೇಳಿದಾಗ ಹರೀಶ್ ಎಂಬುವರು ರಮೇಶ್ ಅವರಿಗೆ ಬೈದಿದ್ದು ಇಬ್ಬರ ನಡುವೆ ಗಲಾಟೆ ನಡೆದಿತ್ತು.
ನ.8ರ ರಾತ್ರಿ ಏಳರ ಸುಮಾರಿಗೆ ರಮೇಶ ಗೌಡರು ಪೆರ್ಲ ದೇವಸ್ಥಾನದಲ್ಲಿ ನಡೆಯುವ ವಾರದ ಭಜನೆಗೆ ತನ್ನ ಬೈಕ್‌ನಲ್ಲಿ ತೆರಳಿದ್ದು, ತನ್ನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ದೇವಸ್ಥಾನಕ್ಕೆ ತಿರುಗುವ ಜಾಗದಲ್ಲಿ ಆರೋಪಿ ಹರೀಶ ಮತ್ತಿಬ್ಬರು ಕಾದು ಕುಳಿತಿದ್ದು, ಇವರ ಬೈಕ್‌ಗೆ ಅಡ್ಡ ಹೋಗಿ ರಮೇಶ್ ಅವರಿಗೆ ಕತ್ತಿಯಿಂದ ಕಡಿದಿದ್ದಾರೆ.
ಈ ಸಂದರ್ಭ ಬೈಕ್ ಪಲ್ಟಿಯಾಗಿದ್ದು, ಜೀವರಕ್ಷಣೆಗೆಂದು ಮತ್ತೊಂದು ದಾರಿಯಲ್ಲಿ ರಮೇಶ್ ಅವರು ಓಡಿ ಹೋಗಿದ್ದಾರೆ. ಆಗ ಬೆನ್ನಟ್ಟಿದ ಆರೋಪಿಯು ರಮೇಶರನ್ನು ಭೀಭತ್ಸ್ಯವಾಗಿ ಕತ್ತಿಯಿಂದ ಕಡಿದು ಕೊಲೆ ನಡೆಸಿ, ಪರಾರಿಯಾಗಿದ್ದಾರೆ. ರಮೇಶ್‌ ಅವರ ಬೊಬ್ಬೆ ಕೇಳಿ ಅವರ ಪತ್ನಿ ಸ್ಥಳಕ್ಕೆ ಓಡಿ ಬಂದರಾದರೂ ಆ ವೇಳೆಗೆ ಕತ್ತಿಯಿಂದ ಕಡೆದ ಪರಿಣಾಮ ಮುಖದಲ್ಲಿ, ಬಾಯಲ್ಲಿ ಎರಡು ಕೈಗಳಲಲ್ಲಿ, ಬಲ ತೋಳಿನಲ್ಲಿ ಮತ್ತು ಮೈಯಲ್ಲಿ ಅಲ್ಲಲ್ಲಿ ಗಾಯವಾಗಿ ರಕ್ತ ಹರಿದು ಮೃತಪಟ್ಟಿರುತ್ತಾರೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಎಸ್ಪಿ ಆಗಮನ:
ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ಅಧಿಕ್ಷಕ ಯತೀಶ್‌ ಎನ್‌, ಪುತ್ತೂರು ಡಿವೈ ಎಸ್ಪಿ ಅರುಣ್‌ ನಾಗೇಗೌಡ, ವೃತ್ತ ನಿರೀಕ್ಷಕ ರವಿ ಬಿ.ಎಸ್‌, ಉಪ್ಪಿನಂಗಡಿ ಪೊಲೀಸ್‌ ಉಪನಿರೀಕ್ಷಕ ಅವಿನಾಶ್‌ ಗೌಡ, ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿದ್ದು, ಮಹಜರು ಪ್ರಕ್ರಿಯೇ ನಡೆಸಿದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಯಾದ ರಮೇಶ್ ಗೌಡ ಅವರು, ಸಜ್ಜನ ವ್ಯಕ್ತಿಯಾಗಿದ್ದು, ಉತ್ತಮ ಭಜನಾ ಸಂಘಟಕರಾಗಿದ್ದರು. ಗೋಳಿತೊಟ್ಟು ವಲಯ ಭಜನಾ ಪರಷತ್ ಅಧ್ಯಕ್ಷರಾಗಿ, ಆಲಂತಾಯ ಪೆರ್ಲ ಶ್ರೀ ಷಣ್ಮುಖ ಭಜನಾ ಮಂಡಳಿ ಅಧ್ಯಕ್ಷರಾಗಿ, ಒಕ್ಕಲಿಗ ಗೌಡ ಸೇವಾ ಸಂಘದ ಆಲಂತಾಯ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರಲ್ಲದೆ, ಪೆರ್ಲ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಕ್ರೀಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಮೃತರು ತಂದೆ ವೆಂಕಪ್ಪ ಗೌಡ, ತಾಯಿ ದೇಜಮ್ಮ, ಪತ್ನಿ ಗೀತಾ, ಓರ್ವ ಪುತ್ರಿ ಹಾಗೂ ಓರ್ವ ಪುತ್ರ, ಸಹೋದರಿಯೋರ್ವರನ್ನು ಅಗಲಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…

4 hours ago

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

1 day ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

2 days ago

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…

2 days ago

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…

2 days ago

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…

2 days ago