ಮಂಗಳೂರು ; ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ ಅಲ್ಲೇ ಪಕ್ಕದಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಲು ಸಾರ್ವಜನಿಕರು ನಿಶ್ಚಯಿಸಿರುತ್ತಾರೆ. ಆದರೆ ಉಳಾಯಿಬೆಟ್ಟು -ಪೆರ್ಮಂಕಿ-ಮಲ್ಲೂರು ತೀರಾ -ಬಿ.ಸಿ.ರೋಡ್ -ಅರ್ಕುಳ- ಅಡ್ಯಾರ್ಗೆ ರಾಷ್ಟ್ರೀಯ ಹೆದ್ದಾರಿ 169 ರಿಂದ ನೇರ ಸಂಪರ್ಕ ಹೊಂದಿರುವ ಈ ಕಿರು ಸೇತುವೆ, ನಿಷೇಧಗೊಂಡಿರುವ ಹಿನ್ನಲೆಯಲ್ಲಿ, ಈ ಭಾಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಮಹಿಳೆಯರು ಮತ್ತು ವಯೋವೃದ್ಧರ ಈ ಮಾರ್ಗದಲ್ಲಿ ಸಾರ್ವಜನಿಕ ಕಷ್ಟದಾಯಕವಾಗಿದೆ. ಕಿರು ಸೇತುವೆ ನಿಷೇಧದ ಬಳಿಕ ವಾಹನಗಳು (KSRTC ಬಸ್ಸುಗಳು ಮತ್ತು ಖಾಸಾಗಿ ಶಾಲಾ ಕಾಲೇಜು ಬಸ್ಸುಗಳು)ಸ್ಥಗಿತಗೊಂಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಹೇಳಿದ್ದಾರೆ.
ಈ ಬಾಗದಲ್ಲಿ ಕಿರು ಸೇತುವೆಗೆ ಪರ್ಯಾಯ ಮಣ್ಣಿನ ರಸ್ತೆ ನಿರ್ಮಿಸುವರೇ, ಜಿಲ್ಲಾಡಳಿತಕ್ಕೆ ಮೂರು ಬಾರಿ ಮನವಿ ಸಲ್ಲಿಸಲಾಗಿದ್ದು ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರೊಂದಿಗೆ ಖುದ್ದಾಗಿ ಸಮಸ್ಯೆಯ ಒಳಹೊರವುವನ್ನು ವಿವರಿಸಲಾಗಿತ್ತು.ಆದರೆ ಈವರೆಗೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಹಾಗಾಗಿ ಸ್ಥಳೀಯ ನಾಗರೀಕರು, ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಇತರ ಎಲ್ಲರೂ ಸೇರಿಕೊಂಡು ನವೆಂಬರ್ 13ರಂದು ರಾಷ್ಟ್ರೀಯ ಹೆದ್ದಾರಿ 169ರ ಪರಾರಿಯಲ್ಲಿ “ಸಾರ್ವಜನಿಕ ಪ್ರತಿಭಟನೆ” ನಡೆಸಲು ಉದ್ದೇಶಿಸಿದ್ದೇವೆ. ಈ ಸಾರ್ವಜನಿಕರು, ಎಲ್ಲಾ ಸಂಘ ಸಂಸ್ಥೆಗಳು ಪೂರ್ಣವಾಗಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಇಸ್ಮಾಯಿಲ್,ಮಹಮ್ಮದ್ ಶರೀಫ್,ವಿಶ್ವನಾಥ್ ಶೆಟ್ಟಿ, ದೀನೇಶ್ ಪಲಿಮಾರ್,ದಿನೇಶ್ ಕುಮಾರ್,ಸಂತೋಷ್ ಪೆರ್ಮಂಕಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…