ಜನ ಮನದ ನಾಡಿ ಮಿಡಿತ

Advertisement

ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಆರೋಪ; ಕರಂಬಳ್ಳಿ ದೇವಸ್ಥಾನದಲ್ಲಿ ಆಣೆ ಪ್ರಮಾಣದ ಬದಲು ಪ್ರಾರ್ಥನೆ ಸಲ್ಲಿಕೆ

ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.

ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!