ಜನ ಮನದ ನಾಡಿ ಮಿಡಿತ

Advertisement

ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಆರೋಪ; ಕರಂಬಳ್ಳಿ ದೇವಸ್ಥಾನದಲ್ಲಿ ಆಣೆ ಪ್ರಮಾಣದ ಬದಲು ಪ್ರಾರ್ಥನೆ ಸಲ್ಲಿಕೆ

ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.

ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!