ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.
ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…