ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.
ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…