ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್ ಇಲ್ಲಿನ ಶಾಸಕರಾದ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ,ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ.ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಡುತ್ತಿದ್ದಾರೆ.ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ,ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್,ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್, ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ, ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ, ಶಾಫಿ ಮುಡಿಪು, ದಿವ್ಯರಾಜ್ ಕುತ್ತಾರ್, ರಫೀಕ್ ಹರೇಕಳ, ಇಬ್ರಾಹಿಂ ಮದಕ ಉಪಸ್ಥಿತರಿದ್ದರು.ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…