ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್ ಇಲ್ಲಿನ ಶಾಸಕರಾದ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ,ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ.ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಡುತ್ತಿದ್ದಾರೆ.ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ,ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್,ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್, ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ, ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ, ಶಾಫಿ ಮುಡಿಪು, ದಿವ್ಯರಾಜ್ ಕುತ್ತಾರ್, ರಫೀಕ್ ಹರೇಕಳ, ಇಬ್ರಾಹಿಂ ಮದಕ ಉಪಸ್ಥಿತರಿದ್ದರು.ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…