ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್ ಇಲ್ಲಿನ ಶಾಸಕರಾದ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ,ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ.ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಡುತ್ತಿದ್ದಾರೆ.ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ,ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್,ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್, ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ, ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ, ಶಾಫಿ ಮುಡಿಪು, ದಿವ್ಯರಾಜ್ ಕುತ್ತಾರ್, ರಫೀಕ್ ಹರೇಕಳ, ಇಬ್ರಾಹಿಂ ಮದಕ ಉಪಸ್ಥಿತರಿದ್ದರು.ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…