ಜನ ಮನದ ನಾಡಿ ಮಿಡಿತ

Advertisement

ಫ್ರಾನ್ಸ್‌ನಲ್ಲಿ ಭಾರತದ ಯುಪಿಐ ಬಳಕೆ, ವಿದ್ಯಾರ್ಥಿಗಳಿಗೆ 5 ವರ್ಷದ ದೀರ್ಘಾವಧಿಯ ಪೋಸ್ಟ್‌ ಸ್ಟಡಿ ವೀಸಾ ಸೌಲಭ್ಯ: ಪ್ರಧಾನಿ ಮೋದಿ

ಪ್ಯಾರಿಸ್ (ಫ್ರಾನ್ಸ್): ಪ್ರಧಾನಿ ನರೇಂದ್ರ ಮೋದಿ ಯವರ ಫ್ರಾನ್ಸ್ ಬೇಟಿ ಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಜೊತೆಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಹಾಗು ಫ್ರಾನ್ಸ್ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದದ ಮೂಲದ ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಮುಂದಿನ ದಿನಗಳಲ್ಲಿ ರೂಪಾಯಿಗಳಲ್ಲಿ ವ್ಯವಹಾರ ಮಾಡಲು ಸಾಧ್ಯವಾಗುತ್ತದೆ. ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಭಾರತದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಯಾಗಿದೆ. ಈ ವರ್ಷದ ಆರಂಭದಲ್ಲಿ UPI ಮತ್ತು ಸಿಂಗಾಪುರದ ‘PayNow ‘ ಎರಡೂ ದೇಶಗಳ ಬಳಕೆದಾರರಿಗೆ ಗಡಿಯಾಚೆಗಿನ ವಹಿವಾಟುಗಳನ್ನು ಮಾಡಲು ಅನುಕೂಲವಾಗುವಂತೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದೀಗ ಫ್ರಾನ್ಸ್ ಜೊತೆಗಿನ ಈ ಒಪ್ಪಂದವು ಸಹ ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಅನುಕೂಲವಾಗಲಿದೆ. ಡಿಜಿಟಲ್ ಮೂಲಸೌಕರ್ಯವು ಎರಡು ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ. ಭಾರತ ಮತ್ತು ಫ್ರಾನ್ಸ್ ದೀರ್ಘಕಾಲದಿಂದ ಪುರಾತತ್ವ ಕಾರ್ಯಾಚರಣೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ಮೋದಿ ಹೇಳಿದರು.

5 ವರ್ಷದ ದೀರ್ಘ ಅವಧಿಯ ಪೋಸ್ಟ್‌ ಸ್ಟಡಿ ವೀಸಾ : ಫ್ರಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಈಗ ಐದು ವರ್ಷಗಳ ದೀರ್ಘಾವಧಿಯ ಅಧ್ಯಯನ ವೀಸಾವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ತಿಳಿಸಿದರು. ಈ ಹಿಂದೆ ಭಾರತೀಯ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕೆಲಸದ ವೀಸಾ ನೀಡಲಾಗುತ್ತಿತ್ತು.

ಫ್ರಾನ್ಸ್ ಪ್ರಧಾನಿ ಎಲಿಸಬೆತ್ ಬೋರ್ನ್ ಅವರು ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಎರಡು ದಿನಗಳ ಅಧಿಕೃತ ಭೇಟಿಗಾಗಿ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!