ಮಂಗಳೂರು: ಖ್ಯಾತ ಸಾಂಸ್ಕೃತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್ಎಸ್ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆ ಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತ್ರ ವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣಿತಿ ಹೊಂದಿದವರಾಗಿದ್ದರು. ಬೋನಿಫೇಸ್ ಪಿಂಟೋ ಅವರ ಪಾರ್ಥಿವ ಶರೀರವನ್ನು ನ. 11ರಂದು ಡಾನ್ ಬಾಸ್ಕೋ ಹಾಲ್ನಲ್ಲಿ ಮಧ್ಯಾಹ್ನ 2.15 ಕ್ಕೆ ಮತ್ತು ಜೆಪ್ಪು ಚರ್ಚ್ನಲ್ಲಿ 3 .30ಕ್ಕೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಿಕರು ಮಾಹಿತಿ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…