ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ.
ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ.ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.
ಆರ್ಥಿಕ ನೆರವು ಗೃಹಲಕ್ಷ್ಮಿ!
ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.
ಶಾಸಕರಿಂದ ಸನ್ಮಾನ
ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್ ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ತನಗೆ ಕೆಲಸಕ್ಕೆ ತೆರಳಲು ಈ ವಾಹನ ನೆರವಾಗಲಿದೆ. ಸರಕಾರಕ್ಕೆ ಹಾಗೂ ಶಾಸಕರಿಗೆ ಸಲೀಂ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…