ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ.
ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ.ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.
ಆರ್ಥಿಕ ನೆರವು ಗೃಹಲಕ್ಷ್ಮಿ!
ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.
ಶಾಸಕರಿಂದ ಸನ್ಮಾನ
ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್ ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ತನಗೆ ಕೆಲಸಕ್ಕೆ ತೆರಳಲು ಈ ವಾಹನ ನೆರವಾಗಲಿದೆ. ಸರಕಾರಕ್ಕೆ ಹಾಗೂ ಶಾಸಕರಿಗೆ ಸಲೀಂ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…