ಜನ ಮನದ ನಾಡಿ ಮಿಡಿತ

Advertisement

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌  ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ.

ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.  ಕಳೆದ ಸೆಪ್ಟೆಂಬರ್‌ 24ರಂದು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿತ್ತು.
ಕಳೆದ ಸೆಪ್ಟೆಂಬರ್‌ 25ರಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಜಮೀರ್‌ ʻನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಮರುದಿನ ತಮ್ಮ ಹೇಳಿಕೆ ಕುರಿತು ಕ್ಷಮೆ ಕೋರಿದ್ದರು.  ಜಮೀರ್‌ ಅವರ ಈ ಹೇಳಿಕೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ನ್ಯಾಯಾಂಗ ನಿಂದನೆಯ ಜೊತೆಗೆ ಸಚಿವ ಜಮೀರ್ ಅಹಮದ್ ವಿರುದ್ಧ ಕ್ರಿಮಿನಲ್ ಪ್ರೊಸಿಡಿಂಗ್‌ಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಅಡ್ವೋಕೇಟ್ ಜನರಲ್‌ಗೆ ಪತ್ರ ಬರೆದಿರುವ ರಾಜ್ಯಪಾಲರು ಸಚಿವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!