ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ.
ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ.ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಹಾಜರಾದ ಪೋಲೀಸರು ಇಲ್ಲಿನ ಮ್ಯಾನೇಜರ್ ಬಳಿ ಸಿಸಿಕ್ಯಾಮರ ದ ಪೂಟೇಜ್ ಗಾಗಿ ಕೇಳಿದಾಗ ಸಭಾಂಗಣದಲ್ಲಿ ಕ್ಯಾಮರಾ ಇಲ್ಲದಿರುವುದು ಬೆಳಕಿಗೆ ಬಂದಿದೆ.
ಈ ವೇಳೆ ಮದುವೆಗೆ ಆಗಮಿಸಿದ ಬಾಲಕಿಯ ಸಂಬಂಧಿಕರು , ಪೋಷಕರು ಮತ್ತು ಮ್ಯಾನೇಜರ್ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗಿದೆ.ಬಂಗಾರ ಕಳೆದುಹೋಗಿದೆಯಾ? ಅಥವಾ ಕಳ್ಳರು ಕಳ್ಳತನ ಮಾಡಿದ್ದಾರಾ? ಎಂಬುದು ಇಲ್ಲಿ ಅಸ್ಪಷ್ಟವಾಗಿದೆ. ಈ ಘಟನೆಯ ಬಗ್ಗೆ ಕೂಲಂಕಷವಾಗಿ ತಿಳಿದುಕೊಳ್ಳಲು ಸಿ.ಸಿ.ಕ್ಯಾಮರಾ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ಅಷ್ಟಕ್ಕೂ ಚಿನ್ನ ಕಳೆದುಕೊಂಡ ಬಾಲಕಿಯ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ವಿನಹಃ ದೂರು ನೀಡಲು ಅವರು ಮುಂದಾಗಿಲ್ಲ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದರೆ.
ಆದರೆ ನಗರ ಠಾಣಾ ಪೋಲೀಸರು ಮಾತ್ರ ನೂತನ ತಂತ್ರಜ್ಞಾನದ ಮೂಲಕ ಇಲ್ಲಿ ಚಿನ್ನ ಕಳೆದುಹೋಗಿರುವ ವಿಚಾರವನ್ನು ನಮೂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಭಾಂಗಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನಗಳು ನಡೆಯುವು ಅತಿಯಾಗಿರುವ ಕಾರಣಕ್ಕಾಗಿ ಎಲ್ಲಾ ಮದುವೆ ಮಂಟಪಗಳಲ್ಲಿಯೂ ಸಿ.ಸಿ.ಕ್ಯಾಮರಾ ಅಳವಡಿಸಿ ಎಂದು ಪೋಲೀಸ್ ಇಲಾಖೆ ಅತ್ಯಂತ ಕಠಿಣವಾಗಿ ಅದೇಶ ನೀಡಿದೆಯಾದರೂ ಇಲ್ಲಿನ ಮಂಟಪದಲ್ಲಿ ಯಾಕೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿಲ್ಲ ಎಂಬ ಪ್ರಶ್ನೆಯನ್ನು ಚಿನ್ನ ಕಳೆದುಕೊಂಡವರ ಸಂಬಂಧಿಕರು ಮಾಡಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…