ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ.
ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ.ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಹಾಜರಾದ ಪೋಲೀಸರು ಇಲ್ಲಿನ ಮ್ಯಾನೇಜರ್ ಬಳಿ ಸಿಸಿಕ್ಯಾಮರ ದ ಪೂಟೇಜ್ ಗಾಗಿ ಕೇಳಿದಾಗ ಸಭಾಂಗಣದಲ್ಲಿ ಕ್ಯಾಮರಾ ಇಲ್ಲದಿರುವುದು ಬೆಳಕಿಗೆ ಬಂದಿದೆ.
ಈ ವೇಳೆ ಮದುವೆಗೆ ಆಗಮಿಸಿದ ಬಾಲಕಿಯ ಸಂಬಂಧಿಕರು , ಪೋಷಕರು ಮತ್ತು ಮ್ಯಾನೇಜರ್ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗಿದೆ.ಬಂಗಾರ ಕಳೆದುಹೋಗಿದೆಯಾ? ಅಥವಾ ಕಳ್ಳರು ಕಳ್ಳತನ ಮಾಡಿದ್ದಾರಾ? ಎಂಬುದು ಇಲ್ಲಿ ಅಸ್ಪಷ್ಟವಾಗಿದೆ. ಈ ಘಟನೆಯ ಬಗ್ಗೆ ಕೂಲಂಕಷವಾಗಿ ತಿಳಿದುಕೊಳ್ಳಲು ಸಿ.ಸಿ.ಕ್ಯಾಮರಾ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ಅಷ್ಟಕ್ಕೂ ಚಿನ್ನ ಕಳೆದುಕೊಂಡ ಬಾಲಕಿಯ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ವಿನಹಃ ದೂರು ನೀಡಲು ಅವರು ಮುಂದಾಗಿಲ್ಲ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದರೆ.
ಆದರೆ ನಗರ ಠಾಣಾ ಪೋಲೀಸರು ಮಾತ್ರ ನೂತನ ತಂತ್ರಜ್ಞಾನದ ಮೂಲಕ ಇಲ್ಲಿ ಚಿನ್ನ ಕಳೆದುಹೋಗಿರುವ ವಿಚಾರವನ್ನು ನಮೂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಭಾಂಗಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನಗಳು ನಡೆಯುವು ಅತಿಯಾಗಿರುವ ಕಾರಣಕ್ಕಾಗಿ ಎಲ್ಲಾ ಮದುವೆ ಮಂಟಪಗಳಲ್ಲಿಯೂ ಸಿ.ಸಿ.ಕ್ಯಾಮರಾ ಅಳವಡಿಸಿ ಎಂದು ಪೋಲೀಸ್ ಇಲಾಖೆ ಅತ್ಯಂತ ಕಠಿಣವಾಗಿ ಅದೇಶ ನೀಡಿದೆಯಾದರೂ ಇಲ್ಲಿನ ಮಂಟಪದಲ್ಲಿ ಯಾಕೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿಲ್ಲ ಎಂಬ ಪ್ರಶ್ನೆಯನ್ನು ಚಿನ್ನ ಕಳೆದುಕೊಂಡವರ ಸಂಬಂಧಿಕರು ಮಾಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…