ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ.
ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ.ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಹಾಜರಾದ ಪೋಲೀಸರು ಇಲ್ಲಿನ ಮ್ಯಾನೇಜರ್ ಬಳಿ ಸಿಸಿಕ್ಯಾಮರ ದ ಪೂಟೇಜ್ ಗಾಗಿ ಕೇಳಿದಾಗ ಸಭಾಂಗಣದಲ್ಲಿ ಕ್ಯಾಮರಾ ಇಲ್ಲದಿರುವುದು ಬೆಳಕಿಗೆ ಬಂದಿದೆ.
ಈ ವೇಳೆ ಮದುವೆಗೆ ಆಗಮಿಸಿದ ಬಾಲಕಿಯ ಸಂಬಂಧಿಕರು , ಪೋಷಕರು ಮತ್ತು ಮ್ಯಾನೇಜರ್ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗಿದೆ.ಬಂಗಾರ ಕಳೆದುಹೋಗಿದೆಯಾ? ಅಥವಾ ಕಳ್ಳರು ಕಳ್ಳತನ ಮಾಡಿದ್ದಾರಾ? ಎಂಬುದು ಇಲ್ಲಿ ಅಸ್ಪಷ್ಟವಾಗಿದೆ. ಈ ಘಟನೆಯ ಬಗ್ಗೆ ಕೂಲಂಕಷವಾಗಿ ತಿಳಿದುಕೊಳ್ಳಲು ಸಿ.ಸಿ.ಕ್ಯಾಮರಾ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ಅಷ್ಟಕ್ಕೂ ಚಿನ್ನ ಕಳೆದುಕೊಂಡ ಬಾಲಕಿಯ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ವಿನಹಃ ದೂರು ನೀಡಲು ಅವರು ಮುಂದಾಗಿಲ್ಲ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದರೆ.
ಆದರೆ ನಗರ ಠಾಣಾ ಪೋಲೀಸರು ಮಾತ್ರ ನೂತನ ತಂತ್ರಜ್ಞಾನದ ಮೂಲಕ ಇಲ್ಲಿ ಚಿನ್ನ ಕಳೆದುಹೋಗಿರುವ ವಿಚಾರವನ್ನು ನಮೂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಭಾಂಗಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನಗಳು ನಡೆಯುವು ಅತಿಯಾಗಿರುವ ಕಾರಣಕ್ಕಾಗಿ ಎಲ್ಲಾ ಮದುವೆ ಮಂಟಪಗಳಲ್ಲಿಯೂ ಸಿ.ಸಿ.ಕ್ಯಾಮರಾ ಅಳವಡಿಸಿ ಎಂದು ಪೋಲೀಸ್ ಇಲಾಖೆ ಅತ್ಯಂತ ಕಠಿಣವಾಗಿ ಅದೇಶ ನೀಡಿದೆಯಾದರೂ ಇಲ್ಲಿನ ಮಂಟಪದಲ್ಲಿ ಯಾಕೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿಲ್ಲ ಎಂಬ ಪ್ರಶ್ನೆಯನ್ನು ಚಿನ್ನ ಕಳೆದುಕೊಂಡವರ ಸಂಬಂಧಿಕರು ಮಾಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…