ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ.
ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ.ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಹಾಜರಾದ ಪೋಲೀಸರು ಇಲ್ಲಿನ ಮ್ಯಾನೇಜರ್ ಬಳಿ ಸಿಸಿಕ್ಯಾಮರ ದ ಪೂಟೇಜ್ ಗಾಗಿ ಕೇಳಿದಾಗ ಸಭಾಂಗಣದಲ್ಲಿ ಕ್ಯಾಮರಾ ಇಲ್ಲದಿರುವುದು ಬೆಳಕಿಗೆ ಬಂದಿದೆ.
ಈ ವೇಳೆ ಮದುವೆಗೆ ಆಗಮಿಸಿದ ಬಾಲಕಿಯ ಸಂಬಂಧಿಕರು , ಪೋಷಕರು ಮತ್ತು ಮ್ಯಾನೇಜರ್ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗಿದೆ.ಬಂಗಾರ ಕಳೆದುಹೋಗಿದೆಯಾ? ಅಥವಾ ಕಳ್ಳರು ಕಳ್ಳತನ ಮಾಡಿದ್ದಾರಾ? ಎಂಬುದು ಇಲ್ಲಿ ಅಸ್ಪಷ್ಟವಾಗಿದೆ. ಈ ಘಟನೆಯ ಬಗ್ಗೆ ಕೂಲಂಕಷವಾಗಿ ತಿಳಿದುಕೊಳ್ಳಲು ಸಿ.ಸಿ.ಕ್ಯಾಮರಾ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ಅಷ್ಟಕ್ಕೂ ಚಿನ್ನ ಕಳೆದುಕೊಂಡ ಬಾಲಕಿಯ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ವಿನಹಃ ದೂರು ನೀಡಲು ಅವರು ಮುಂದಾಗಿಲ್ಲ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದರೆ.
ಆದರೆ ನಗರ ಠಾಣಾ ಪೋಲೀಸರು ಮಾತ್ರ ನೂತನ ತಂತ್ರಜ್ಞಾನದ ಮೂಲಕ ಇಲ್ಲಿ ಚಿನ್ನ ಕಳೆದುಹೋಗಿರುವ ವಿಚಾರವನ್ನು ನಮೂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಭಾಂಗಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನಗಳು ನಡೆಯುವು ಅತಿಯಾಗಿರುವ ಕಾರಣಕ್ಕಾಗಿ ಎಲ್ಲಾ ಮದುವೆ ಮಂಟಪಗಳಲ್ಲಿಯೂ ಸಿ.ಸಿ.ಕ್ಯಾಮರಾ ಅಳವಡಿಸಿ ಎಂದು ಪೋಲೀಸ್ ಇಲಾಖೆ ಅತ್ಯಂತ ಕಠಿಣವಾಗಿ ಅದೇಶ ನೀಡಿದೆಯಾದರೂ ಇಲ್ಲಿನ ಮಂಟಪದಲ್ಲಿ ಯಾಕೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿಲ್ಲ ಎಂಬ ಪ್ರಶ್ನೆಯನ್ನು ಚಿನ್ನ ಕಳೆದುಕೊಂಡವರ ಸಂಬಂಧಿಕರು ಮಾಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…