ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಬಂಗಾರು ಹನುಮಂತ ಅವರ ಪರವಾಗಿ ವಡ್ಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರಕಾರವು ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಿವಾದಗಳೇ ಬಂಡವಾಳವಾಗಿದೆ ಹೊರತು ಜನರ ಸಂಕಷ್ಟ ಕೇಳುವವರಿಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗಳು ಮೂಲೆ ಸೇರುತ್ತಿರುವಂತೆ ರಾಜ್ಯ ಸರಕಾರವೂ ಕೂಡ ಮೂಲೆ ಗುಂಪಾಗುವ ದಿನ ದೂರವಿಲ್ಲ ಎಂದು ಹೇಳಿದರು.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಶತ ಸಿದ್ಧ. ಕಾಂಗ್ರೆಸಿನ ಷಡ್ಯಂತ್ರಗಳಿಗೆ ಮತದಾರ ಮರುಳಾಗದೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಕುರಿತು ಕ್ಷೇತ್ರದ ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತಿದ್ದು ಬಿಜೆಪಿ ಗೆಲುವಿನ ನಗೆ ಬೀರಲಿದೆ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…