ಜನ ಮನದ ನಾಡಿ ಮಿಡಿತ

Advertisement

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು‌.


ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂ‌ಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿ‌ಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿ‌ಮಟ್ಟ ಹಾಕಿ‌ಎಂದು ಸೂಚನೆ ನೀಡಿದರು.
ಈ‌ಸಂಧರ್ಭದಲ್ಲಿ‌ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್‌ಕುಂಞಿ‌ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!