ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿಮಟ್ಟ ಹಾಕಿಎಂದು ಸೂಚನೆ ನೀಡಿದರು.
ಈಸಂಧರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್ಕುಂಞಿಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…