ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿಮಟ್ಟ ಹಾಕಿಎಂದು ಸೂಚನೆ ನೀಡಿದರು.
ಈಸಂಧರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್ಕುಂಞಿಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…