ಜನ ಮನದ ನಾಡಿ ಮಿಡಿತ

Advertisement

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕಿನ ನೂತನ ವಿಟ್ಲ ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ.14 ಗುರುವಾರ ವಿಟ್ಲ ಎಂಪೈರ್ ಮಾಲ್ನ ಒಂದನೇ ಮಹಡಿಯಲ್ಲಿ ನಡೆಯಲಿದೆ ಎಂದು ಬ್ಯಾಂಕ್ನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಕಿಶೋರ್ ಕೋಳತ್ತಾಯ ತಿಳಿಸಿದ್ದಾರೆ.

 

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1909 ರಲ್ಲಿ ಅಂದರೆ 115 ವರ್ಷಗಳ ಹಿಂದೆ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಿಂದ ಸ್ಥಾಪಿಸಲ್ಪಟ್ಟ ಪುತ್ತೂರು ಕೊ ಓಪರೇಟಿವ್ ಟೌನ್ ಬ್ಯಾಂಕ್ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ. 2019 ರ ಸಾಲಿನಲ್ಲಿ ಒಟ್ಟು 98 ಕೋಟಿ ಇದ್ದ ವ್ಯವಹಾರ ಪ್ರಸ್ತುತ 120 ಕೋಟಿಗೆ ಮಿಕ್ಕಿದೆ. ಮೀಸಲು ಕ್ಷೇಮನಿಧಿ 2.39 ಕೋಟಿ ಇದ್ದದ್ದು 4.81 ಕೋಟಿಗೂ ಅಧಿಕವಿದೆ. ಪ್ರಸ್ತುತ ವಾರ್ಷಿಕ ಲಾಭ 1.55 ಕೋಟಿ ರೂ. ಆಗಿರುತ್ತದೆ. 2023-24ನೇ ವರ್ಷದಲ್ಲಿ ಮೀಸಲು ನಿಧಿಗೆ 77 ಲಕ್ಷಕ್ಕೂ ಮಿಕ್ಕಿ ವರ್ಗಾಯಿಸಲಾಗಿದ್ದು, ಇದುವರೆಗಿನ ದಾಖಲೆಯಾಗಿದೆ. ಕಳೆದ ಬಾರಿ ಸದಸ್ಯರಿಗೆ 10 ಶೇ. ಡಿವಿಡೆಂಡ್ ನೀಡಲಾಗಿದ್ದು, ಈ ವರ್ಷ 12 ಶೇ. ಡಿವಿಡೆಂಟ್ ನೀಡಲಾಗಿದೆ. ರಿಸರ್ವ್ಬ್ಯಾಂಕ್ನಿಯಮದಂತೆ ಶೇ.10 ಕ್ಕಿಂತ ಜಾಸ್ತಿ ಅನುಪಾತವಿರಬೇಕು. ಆದರೆ ನಮ್ಮ ಬ್ಯಾಂಕ್ಈ ವರ್ಷ ಅನುಪಾತ ಶೇ.33 ಆಗಿದೆ. ಇದು ಬ್ಯಾಂಕ್ನ ಸದೃಢತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ಚೌಟ ಉದ್ಘಾಟನೆ ನೆರವೇರಿಸಲಿದ್ದು, ಬ್ಯಾಂಕ್ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭದ್ರತಾ ಕೊಠಡಿ, ಮಾಜಿ ಶಾಸಕ ಸಂಜೀವ ಮಠಂದೂರು ಗಣಕಯಂತ್ರ ಉದ್ಘಾಟಿಸುವರು. ಕ್ಯಾಂಪ್ಕೋ ಲಿ.ನ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಪ್ರಥಮ ಠೇವಣಿ ಪತ್ರ ಹಸ್ತಾಂತರ ಮಾಡುವರು. ಅತಿಥಿಗಳಾಗಿ ಎಸ್ಸಿಡಿಸಿಸಿ ಬ್ಯಾಂಕ್ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್, ವಿಟ್ಲ ಪಟ್ಟಣ ಪಂಚಾಯತ್ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ, ವಿಟ್ಲ ಅರಮನೆಯ ಬಂಗಾರು ಅರಸರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿಶ್ವಾಸ್ಶೆಣೈ, ಸದಸ್ಯ ಚಂದ್ರಶೇಖರ ಬಪ್ಪಳಿಗೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ್ ಶೆಟ್ಟಿ, ಕಿರಣ್ ಕುಮಾರ್ ಬಲ್ನಾಡ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!