ಕರಾವಳಿ

ಪಡೀಲ್ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮಗಳು

ಮಂಗಳೂರುಪಡೀಲ್ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ನಮ್ಮ ನಗರ ಸ್ವಚ್ಚ ನಗರ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಜನಪ್ರಿಯ ಆಸ್ಪತ್ರೆಯಲ್ಲಿ ನಡೆಯಿತು.

ಗಿಔIಅಇ: ಈ ಕಾರ್ಯಕ್ರಮದಲ್ಲಿ ಸಾಧಕರಾದ ನಜೀರ್ ಬೆಂಗ್ರೆ ಮತ್ತು ಜಾರ್ಜ್ ಪಿವಿ ಅವರನ್ನು ಸನ್ಮಾನಿಸಲಾಯಿತು. ಪಡೀಲ್ ಸುತ್ತಮುತ್ತಲಿನಲ್ಲಿ ಡಾ. ಅಬ್ದುಲ್ ಬಶೀರ್ ವಿ.ಕೆ ಅವರ ನೇತೃತ್ವದಲ್ಲಿ ಹೆದ್ದಾರಿಯಲ್ಲಿ ಕಸ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿಕೆ ಮಾತನಾಡಿ, ಕನ್ನಡ ನಾಡಿನಲ್ಲಿ ಎಲ್ಲವೂ ನಮಗೆ ದೊರೆತಿದ್ದು, ಕನ್ನಡದ ಬಗ್ಗೆ ಹೆಮ್ಮೆಯಾಗುತ್ತಿದೆ. ಕನ್ನಡ ನಾಡಿನಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಹಾಸನದಲ್ಲಿ ಹಲವು ವರ್ಷಗಳಿಂದ ಕನ್ನಡ ಉಳಿಸಲು ಬೆಳೆಸಲು ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೀಗ ಮಂಗಳೂರಿನಲ್ಲಿ ಮೊದಲ ಬಾರೀ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದ್ರು.

ಬೈಟ್ : ಡಾ.ಅಬ್ದುಲ್ ಬಶೀರ್ ವಿ.ಕೆ

ಕಾರ್ಪೋಟರ್ ಚಂದ್ರವತಿ ಮಾತನಾಡಿ, ಆರೋಗ್ಯ ಸ್ಚಚ್ಛವಾಗಬೇಕಾದರೆ ಪರಿಸರ ಸ್ವಚ್ಚವಾಗಿಡಬೇಕು, ಹಾಸನದಲ್ಲಿ ಬಶೀರ್ ಅವರ ಸೇವೆ ಶ್ಲಾಘನೀಯ, ಇದೀಗ ಮಂಗಳೂರಿನಲ್ಲಿ ಇನ್ನಷ್ಡು ಸೇವೆ ನೀಡಲು ದೇವರು ಅನುಗ್ರಹಿಸಲಿ ಎಂದು ಶುಭ ಹಾರೈಸಿದ್ರು. ಇದೇ ವೇಳೆ ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ ಹಾಸನದಲ್ಲಿ ಜನರ ಜನಮನ ಗೆದ್ದ ಬಶೀರ್ ಅವರು ನಮ್ಮ ಜಿಲ್ಲೆಯ ಜನಮನ ಗೆದ್ದಿದ್ದಾರೆ. ಸ್ವಚ್ಚತೆ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾನ ಸಾಧ್ಯ ಎಂದ್ರು.

ಎಂ ಫ್ರೆಂಡ್ಸ್ ಸುಜಾ ಮಹಮ್ಮದ್, ಸಂತೋಷ್ ಶೆಟ್ಟಿ, ಸುರೇಶ್ ಆಚಾರ್, ದೇವಿಪ್ರಸಾದ್, ಶಾಕೀರ್ ಅಳಕೆಮಜಲು, ಅಬ್ದುಲ್ ಜಬ್ಬಾರ್ ಮಾರಿಪಳ್ಳ, ಮಹಮ್ಮದ್ ಶಾಕೀರ್, ಆರೀಫ್ ಪಡುಬಿದ್ರೆ, ಉಮ್ಮರ್ ಫಾರೂಕ್, ನಾಸೀರ್ ಕಂಬಳಬೆಟ್ಟು, ಶಾಕೀರ್ ಅಳಕೆಮಜಲು, ಮಹಮ್ಮದ್ ಕಂಬಳಬೆಟ್ಟು, ಗಫೂರ್ ಕಂಬಳಬೆಟ್ಟು, ಜನಪ್ರಿಯ ಆಸ್ಪತ್ರೆಯ ಸಿಇಓಡಾ. ಕಿರಾಸ್ ಪರ್ತಿಪ್ಪಾಡಿ, ಡಾ.ನೂಮನ್, ನೌಸಿನ್ ಬದ್ರಿಯಾ ಉಪಸ್ಥಿತರಿದ್ರು.

ಪುಟ್ಟಣ ಕುಲಾಲ್ ಪ್ರತಿಷ್ಠಾನ, ಎಂ ಫ್ರೆಂಡ್ಸ್ ಮಂಗಳೂರು, ಶಿವ ಫ್ರೆಂಡ್ಸ್ ಕ್ಲಬ್, ಎಸ್ ವೈ ಎಸ್ ಇಸಾಬ ದ.ಕ , ಹಿದಾಯ ಫೌಂಡೇಶನ್ ಮಂಗಳೂರು,ಕನ್ನಡ ಕಟ್ಟೆ ಮಂಗಳೂರು, ಎಸ್ಕೆಎಸ್ ಎಸ್ ಎಫ್ ವಿಖಾಯ, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್, ಮಸೂದ್ ಕಾಲೇಜ್ ಆಫ್ ನರ್ಸಿಂಗ್ ಮಂಗಳೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಧುಮೇಹ, ರಕ್ತದ ಒತ್ತಡ ಪರೀಕ್ಷೆ, ಶಸ್ತ್ರ ಚಿಕಿತ್ಸ ವೈದ್ಯರು, ಕಿಡ್ನಿ ಮತ್ತು ಮೂತ್ರಕೋಶ ತಙ್ಞರು, ಕೀಲು ಮೂಳೆ ಮತ್ತು ಬೆನ್ನು ಮೂಳೆ ಶಸ್ತ್ರ ಚಿಕಿತ್ಸ ತಙ್ಞರು, ಕಿವಿ,ಮೂಗು ಗಂಟಲು ತಙ್ಞರು, ಪ್ರಸೂತಿ ಸ್ತ್ರೀರೋಗ, ಮಕ್ಕಳ ಮತ್ತು ಕಾಸ್ಮೆಟಿಕ್ ಶಸ್ತ್ರ ಚಿಕಿತ್ಸಾ ತಙ್ಞರು ಭಾಗವಹಿಸಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಂಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…

1 day ago

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…

1 day ago

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…

1 day ago

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

2 days ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

2 days ago