ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ : ತಲಪಾಡಿ ಕೊಲೆ ಯತ್ನ ಪ್ರಕರಣ, ಅಪ್ರಾಪ್ತ ಸೇರಿ ನಾಲ್ವರ ಬಂಧನ..!

ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಇಡ್ಯ ಈಶ್ವರ ನಗರದ ಅಣ್ಣಪ್ಪ ಸ್ವಾಮಿ ಯಾನೆ ಮನು (24), ಪಡೀಲ್ ನಾರ್ಲದ ಸಚಿನ್ (24), ಪಜೀರ್ ಪಾದಲ್ ಕೋಡಿಯ ಕುಶಿತ್(18) ಮತ್ತು ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಬಾಲಕನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮೊಹಮ್ಮದ್ ಆಸಿಫ್ ತನ್ನ ಮನೆಯವರ ಜೊತೆಯಲ್ಲಿ ವಾಹನದಲ್ಲಿ ಮಂಗಳೂರಿನಿಂದ ಕೇರಳ ಕಡೆಗೆ ಹೋಗುತ್ತಿರುವಾಗ ಆರೋಪಿಗಳು ಇವರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿರುವುದಾಗಿ ನ.9 ರಂದು ನೀಡಿರುವ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯ.ಎನ್.ನಾಯಕ್ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ. ಎಚ್.ಎನ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳನ್ನು ನ.11ರಂದು ರಾತ್ರಿ 8 ಗಂಟೆಗೆ ದಸ್ತಗಿರಿ ಮಾಡಲಾಗಿರುತ್ತದೆ. ತನಿಖೆ ಪ್ರಗತಿಯಲ್ಲಿರುತ್ತದೆ ಎಂದು ಪೊಲೀಸ್ ಅಧಿಕಾರುಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!