ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ; ಎಸ್ ಐ ಸಹಿತ ಇಬ್ಬರ ಅಮಾನತು..!

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ ಐ ಸೇರಿದಂತೆ ಇಬ್ಬರನ್ನು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.


ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಚೇರ್ಕಾಡಿ ಗ್ರಾಮದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಿಜು ಮೋನು ಮೇಲಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾಸ್ಟೇಬಲ್‌ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಲಾಕಪ್‌ಡೆತ್‌ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸರ ತಂಡ ನಿನ್ನೆಯೇ ಬ್ರಹ್ಮಾವರಕ್ಕೆ ಆಗಮಿಸಿದ್ದು ತನಿಖೆ ಚುರುಕುಗೊಳಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!