ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನವೆಬರ್ 6 ರಂದು ಈ ಘಟನೆ ನಡೆದಿದ್ದು ಬಾಲಕಿಯರೇ ಇರುವ ಹಾಸ್ಟೆಲ್ ಗೆ ಅಪರಿಚಿತ ವ್ಯಕ್ತಿಯೋರ್ವ ನುಗ್ಗಿದ್ದಾನೆ. ಹಾಸ್ಟೆಲ್ನ ಸಿಸಿ ಕ್ಯಾಮಾರಾದಲ್ಲಿ ಆಗಂತುಕನ ಚಲನವಲನ ದಾಖಲಾಗಿದೆ. ಮಧ್ಯ ರಾತ್ರಿ ಸುಮಾರು 2.30 ರಿಂದ 3.30 ರ ವರೆಗೆ ಈ ಆಗಂತುಕ ಹಾಸ್ಟೆಲ್ ಒಳಗೇ ಇದ್ದ ಎನ್ನಲಾಗಿದೆ.
ಆಗಂತುಕನ ಚಲನವಲನವನ್ನು ಹಾಸ್ಟೆಲ್ ಬಾಲಕಿಯೋರ್ವಳು ಧೈರ್ಯ ಮಾಡಿ ವಿಡಿಯೋ ಕೂಡ ಮಾಡಿದ್ದಾಳೆ ಮತ್ತು ಹಾಸ್ಟೆಲ್ ನ ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಹಾಸ್ಟೆಲ್ ಸಿಸಿ ಕ್ಯಾಮಾರಾ ಪರಿಶೀಲಿಸಿದ ಹಾಸ್ಟೆಲ್ ವಾರ್ಡನ್ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆದ್ರೆ ಇದರ ಗಂಭೀರತೆ ಅರಿಯದ ಪುತ್ತೂರು ಮಹಿಳಾ ಠಾಣೆ ಪೋಲೀಸರು ಪ್ರಕರಣ ದಾಖಲಿಸಲು ಉದಾಸೀನತೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಉನ್ನತ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು ನ.10 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ನಿರ್ಲಕ್ಷಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…