ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನವೆಬರ್ 6 ರಂದು ಈ ಘಟನೆ ನಡೆದಿದ್ದು ಬಾಲಕಿಯರೇ ಇರುವ ಹಾಸ್ಟೆಲ್ ಗೆ ಅಪರಿಚಿತ ವ್ಯಕ್ತಿಯೋರ್ವ ನುಗ್ಗಿದ್ದಾನೆ. ಹಾಸ್ಟೆಲ್ನ ಸಿಸಿ ಕ್ಯಾಮಾರಾದಲ್ಲಿ ಆಗಂತುಕನ ಚಲನವಲನ ದಾಖಲಾಗಿದೆ. ಮಧ್ಯ ರಾತ್ರಿ ಸುಮಾರು 2.30 ರಿಂದ 3.30 ರ ವರೆಗೆ ಈ ಆಗಂತುಕ ಹಾಸ್ಟೆಲ್ ಒಳಗೇ ಇದ್ದ ಎನ್ನಲಾಗಿದೆ.
ಆಗಂತುಕನ ಚಲನವಲನವನ್ನು ಹಾಸ್ಟೆಲ್ ಬಾಲಕಿಯೋರ್ವಳು ಧೈರ್ಯ ಮಾಡಿ ವಿಡಿಯೋ ಕೂಡ ಮಾಡಿದ್ದಾಳೆ ಮತ್ತು ಹಾಸ್ಟೆಲ್ ನ ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಹಾಸ್ಟೆಲ್ ಸಿಸಿ ಕ್ಯಾಮಾರಾ ಪರಿಶೀಲಿಸಿದ ಹಾಸ್ಟೆಲ್ ವಾರ್ಡನ್ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆದ್ರೆ ಇದರ ಗಂಭೀರತೆ ಅರಿಯದ ಪುತ್ತೂರು ಮಹಿಳಾ ಠಾಣೆ ಪೋಲೀಸರು ಪ್ರಕರಣ ದಾಖಲಿಸಲು ಉದಾಸೀನತೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಉನ್ನತ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು ನ.10 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ನಿರ್ಲಕ್ಷಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…