ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್ , ಪ್ರೇಮಾನಂದ ಶೆಟ್ಟಿ , ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ರಾಜ್ಯ ಒಬಿಸಿ ಮೋರ್ಛ ಕಾರ್ಯದರ್ಶಿ ಆರ್.ಸಿ.ನಾರಾಯಣ್ , ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ , ಜಿಲ್ಲಾ ಕಾರ್ಯದರ್ಶಿ ವಿಧ್ಯಾ ಗೌರಿ , ನಗರ ಸಭೆ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ , ಉಪಾಧ್ಯಕ್ಷ ಬಾಲಚಂದ್ರ , ಎರಡು ಮಂಡಲಗಳ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು , ಪ್ರಶಾಂತ್ ನೆಕ್ಕಿಲಾಡಿ , ಅನಿಲ್ ತೆಂಕಿಲ , ನಾಗೇಶ್ ಪ್ರಭು ಸೇರಿದಂತೆ ಹಿರಿಯ ಪ್ರಮುಖರು , ಎರಡು ಮಂಡಲಗಳ ಪದಾಧಿಕಾರಿಗಳು , ನಿಕಟಪೂರ್ವ ಪದಾಧಿಕಾರಿಗಳು , ವಿವಿಧ ಮೋರ್ಛಗಳ ಪದಾಧಿಕಾರಿಗಳು , ಮಹಾಶಕ್ತಿಕೇಂದ್ರ ಅಧ್ಯಕ್ಷ , ಕಾರ್ಯದರ್ಶಿಗಳು , ಕಾರ್ಯಕರ್ತರು ಭಾಗವಹಿಸಿದ್ದರು. ನಗರ ಮಂಡಲದ ಪ್ರ.ಕಾರ್ಯದರ್ಶಿ ಅನಿಲ್ ತೆಂಕಿಲ ಸ್ವಾಗತಿಸಿ , ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಉಮೇಶ್ ಕೋಡಿಬೈಲು ವಂದಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…