ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನಲ್ಲಿ ಶ್ರೀ ಹನುಮಯಾಗ’ದ ಆಮಂತ್ರಣ ವಿತರಣೆ

ಪುತ್ತೂರು: ಒಡಿಯೂರು ಸೇವಾ ಬಳಗ ಪುತ್ತೂರು ಘಟಕದ 17 ನೇ ವಾರ್ಷಿಕೋತ್ಸವದ ಪ್ರಯುಕ್ತ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನ.೧೫ ರಂದು ಹಮ್ಮಿಕೊಂಡಿರುವ ಶ್ರೀರಾಮನಾಮತಾರಕ ಹವನಪೂರ್ವಕ `ಶ್ರೀ ಹನುಮಯಾಗ’ದ ಆಮಂತ್ರಣ ಪತ್ರಿಕೆಯನ್ನು ಬುಧವಾರ ನಗರದಲ್ಲಿ ವಿತರಿಸಲಾಯಿತು.

ಬೊಳುವಾರಿನಿಂದ ಆರಂಭಿಸಿ ನಗರದ ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕರಿಗೆ ಆಮಂತ್ರಣ ವಿತರಿಸಲಾಯಿತು.

ವೇ. ಮೂ. ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಹನುಮಯಾಗ ನಡೆಯಲಿದ್ದು, ಅಂದು ಬೆಳಿಗ್ಗೆ ಗಣಪತಿ ಹೋಮ, ಬಳಿಕ ಹನುಮಯಾಗದ ಸಂಕಲ್ಪ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುತ್ತೂರು ಇದರ ಮಹಿಳೆಯರಿಂದ ಭಜನಾ ಕಾರ್ಯಕ್ರಮ, ಶ್ರೀ ರಾಮನಾಮತಾರಕ ಮಂತ್ರ, ಶ್ರೀ ಹನುಮಾನ್ ಚಾಲೀಸಾ ಪಠಣ ನಡೆಯಲಿದೆ. ಬೆಳಗ್ಗೆ ಗಂಟೆ ೧೦.೩೦ಕ್ಕೆ ಯಾಗದ ಪೂರ್ಣಾಹುತಿ ನಡೆಯಲಿದೆ.
೧೧.೩೦ಕ್ಕೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಆಮಂತ್ರಣ ವಿತರಣೆಯ ಸಂದರ್ಭ ಒಡಿಯೂರು ಗುರುದೇವಾ ಸೇವಾ ಬಳಗ ಪುತ್ತೂರು ಘಟಕದ ಅಧ್ಯಕ್ಷ ಸುಧೀರ್ ನೋಂಡ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಪ್ರಮುಖರಾದ ಭವಾನಿಶಂಕರ ಶೆಟ್ಟಿ, ಜಗನ್ನಾಥ ಶೆಟ್ಟಿ, ಸುದೀಪ್ ಶೆಟ್ಟಿ, ಸೋಮನಾಥ ಗೌಡ, ಸವಿನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!