ಪುತ್ತೂರು: ಒಡಿಯೂರು ಸೇವಾ ಬಳಗ ಪುತ್ತೂರು ಘಟಕದ 17 ನೇ ವಾರ್ಷಿಕೋತ್ಸವದ ಪ್ರಯುಕ್ತ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನ.೧೫ ರಂದು ಹಮ್ಮಿಕೊಂಡಿರುವ ಶ್ರೀರಾಮನಾಮತಾರಕ ಹವನಪೂರ್ವಕ `ಶ್ರೀ ಹನುಮಯಾಗ’ದ ಆಮಂತ್ರಣ ಪತ್ರಿಕೆಯನ್ನು ಬುಧವಾರ ನಗರದಲ್ಲಿ ವಿತರಿಸಲಾಯಿತು.
ಬೊಳುವಾರಿನಿಂದ ಆರಂಭಿಸಿ ನಗರದ ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕರಿಗೆ ಆಮಂತ್ರಣ ವಿತರಿಸಲಾಯಿತು.
ವೇ. ಮೂ. ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಹನುಮಯಾಗ ನಡೆಯಲಿದ್ದು, ಅಂದು ಬೆಳಿಗ್ಗೆ ಗಣಪತಿ ಹೋಮ, ಬಳಿಕ ಹನುಮಯಾಗದ ಸಂಕಲ್ಪ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುತ್ತೂರು ಇದರ ಮಹಿಳೆಯರಿಂದ ಭಜನಾ ಕಾರ್ಯಕ್ರಮ, ಶ್ರೀ ರಾಮನಾಮತಾರಕ ಮಂತ್ರ, ಶ್ರೀ ಹನುಮಾನ್ ಚಾಲೀಸಾ ಪಠಣ ನಡೆಯಲಿದೆ. ಬೆಳಗ್ಗೆ ಗಂಟೆ ೧೦.೩೦ಕ್ಕೆ ಯಾಗದ ಪೂರ್ಣಾಹುತಿ ನಡೆಯಲಿದೆ.
೧೧.೩೦ಕ್ಕೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಆಮಂತ್ರಣ ವಿತರಣೆಯ ಸಂದರ್ಭ ಒಡಿಯೂರು ಗುರುದೇವಾ ಸೇವಾ ಬಳಗ ಪುತ್ತೂರು ಘಟಕದ ಅಧ್ಯಕ್ಷ ಸುಧೀರ್ ನೋಂಡ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಪ್ರಮುಖರಾದ ಭವಾನಿಶಂಕರ ಶೆಟ್ಟಿ, ಜಗನ್ನಾಥ ಶೆಟ್ಟಿ, ಸುದೀಪ್ ಶೆಟ್ಟಿ, ಸೋಮನಾಥ ಗೌಡ, ಸವಿನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…