ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸ್ವಚ್ಛತಾ ಬಾಬಾ ಯವರನ್ನು ಶಾಸಕ ವೇದವ್ಯಾಸ ಕಾಮತ್ ರವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ

ಸ್ವಚ್ಛತೆಯ ವಿಷಯದಲ್ಲಿ ಸ್ವತಃ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನೇ ಪ್ರಭಾವಿಸಿದ್ದ ಹಿರಿಯರಾದ ನಿವೃತ್ತ ಸರ್ಕಾರಿ ಶಿಕ್ಷಕ ಶ್ರೀ ಚಂದ್ರಕಾಂತ ರಾಧಾಬಾಯಿ ದಾಮೋದರ್ ಕುಲಕರ್ಣಿ (ಸ್ವಚ್ಛತಾ ಬಾಬಾ) ಯವರನ್ನು ಶಾಸಕ ವೇದವ್ಯಾಸ ಕಾಮತ್ ರವರು ಪುಣೆಯ ಚುನಾವಣಾ ಕಾರ್ಯಗಳ ನಡುವೆ ಭೇಟಿ ಮಾಡಿ ಸನ್ಮಾನಿಸಿದರು.

ನಂತರ ಮಾತನಾಡಿದ ಶಾಸಕರು, ಮಾನ್ಯ ಪ್ರಧಾನಿಗಳು ದೇಶದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದಾಗ ನಿವೃತ್ತಿ ಜೀವನ ನಡೆಸುತ್ತಿದ್ದ ಕುಲಕರ್ಣಿಯವರು ತಮಗೆ ಬರುತ್ತಿದ್ದ 15,000 ಪಿಂಚಣಿಯಲ್ಲಿ ತಿಂಗಳಿಗೆ 5 ಸಾವಿರದಂತೆ, ಒಟ್ಟು 2,60,000/- ಸ್ವಚ್ಛ ಭಾರತ್ ನಿಧಿಗೆ ನೀಡಿ ದೇಶಕ್ಕೆ ಮಾದರಿಯಾಗಿದ್ದರು. ಅನೇಕ ಬಾರಿ ಕಾಶಿ, ಅಯೋಧ್ಯೆಗೆ ತೆರಳಿ 5-10 ದಿವಸಗಳ ಕಾಲ ತಂಗಿ ಸ್ವಚ್ಛತಾ ಕಾರ್ಯ ಮಾಡುವುದರಲ್ಲೇ ಸಂತೃಪ್ತಿಯನ್ನು ಕಾಣುವ ವಿಶೇಷ ವ್ಯಕ್ತಿ ಇವರು. ಇವೆಲ್ಲವನ್ನು ಗಮನಿಸಿ ಮಾನ್ಯ ಪ್ರಧಾನಿಗಳು ತಮ್ಮ ಮನ್ ಕಿ ಬಾತ್ ನಲ್ಲಿ ಇವರ ಬಗ್ಗೆ ಉಲ್ಲೇಖಿಸಿದ್ದು ಮಾತ್ರವಲ್ಲದೇ, ಎರಡು ಬಾರಿ ಅತ್ಯಂತ ಗೌರವದಿಂದ ಕರೆಸಿಕೊಂಡು ಸನ್ಮಾನಿಸಿದ್ದರು ಎಂದು ಶಾಸಕರು ಹೇಳಿದರು.

ಸ್ವತಃ ಪ್ರಧಾನಿಗಳೇ ಕುಲಕರ್ಣಿಯವರ ಕಾರ್ಯದಿಂದ ನಾನು ತುಂಬಾ ಪ್ರಭಾವಿತನಾಗಿ ಪ್ರೇರಣೆ ಪಡೆದಿದ್ದೇನೆ ಎಂದಿರುವುದು ಇಲ್ಲಿ ಗಮನಾರ್ಹವಾಗಿದ್ದು, ಉತ್ತರ ಪ್ರದೇಶದ ಅಮೇಥಿಯಲ್ಲಿ ಜನಸಾಮಾನ್ಯರ ಉಪಯೋಗಕ್ಕಾಗಿ ಸುಮಾರು 450ಕ್ಕೂ ಹೆಚ್ಚು ಕುಡಿಯುವ ನೀರಿನ ಬೋರ್ವೆಲ್ ನಿರ್ಮಾಣಗೊಳಿಸಿರುವ ಇವರು ತ್ರಯಂಬಕೇಶ್ವರದ ಪ್ರಾಚೀನ ಕುಂಡ ಸಹಿತ ಅನೇಕ ಐತಿಹಾಸಿಕ ಕೆರೆಗಳನ್ನು ಪುನರುಜ್ಜೀವನ ಗೊಳಿಸಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿ ನಮ್ಮ ಮಂಗಳೂರಿನ ಶ್ರೀ ರಾಮಕೃಷ್ಣ ಮಠಕ್ಕೂ ಮೂರು ಸಲ ಭೇಟಿ ನೀಡಿ ಸ್ವಚ್ಛತೆಯ ನಿಟ್ಟಿನಲ್ಲಿ ಮಠವು ವಹಿಸಿರುವ ಕಾಳಜಿ ಬಗ್ಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದರು ಎಂದರು.

ಈ ಸಂದರ್ಭದಲ್ಲಿ ಕುಲಕರ್ಣಿಯವರ ಕುಟುಂಬದವರ ಸಹಿತ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು ಸೇರಿದಂತೆ ಹಲವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!